Home ಕರಾವಳಿ ಮಂಗಳೂರು | ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡ ಧೀರಜ್ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

ಮಂಗಳೂರು | ರಸ್ತೆ ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡ ಧೀರಜ್ ಅಂಗಾಂಗ ದಾನಕ್ಕೆ ಕುಟುಂಬ ನಿರ್ಧಾರ

ಮಂಗಳೂರು: ರವಿವಾರ ಬಿಕರ್ನಕಟ್ಟೆಯ ಸಮೀಪ ನಡೆದ ಅಪಘಾತದಲ್ಲಿ ಧೀರಜ್ ಅವರ ಮೆದುಳು ನಿಷ್ಕ್ರಿಯಗೊಂಡಿದ್ದು, ಈ ಹಿನ್ನೆಲೆಯಲ್ಲಿ ಕುಟುಂಬದ ಸಮ್ಮತಿಯ ಮೇರೆಗೆ ಅಂಗಾಂಗ ದಾನ ಪ್ರಕ್ರಿಯೆ ನಡೆಯಲಿದೆ.

ನಗರದ ಖಾಸಗಿ ಆಸ್ಪತ್ರೆಯಲ್ಲಿ ಅಂಗಾಂಗ ದಾನ ಪ್ರಕ್ರಿಯೆ ನಡೆಯಲಿದೆ. ಚೆನ್ನೈ ತಂಡ ಖಾಸಗಿ ವಿಮಾನದ ಮೂಲಕ ಮಂಗಳೂರಿಗೆ ಆಗಮಿಸಿ ಅಂಗಾಂಗಗಳನ್ನು ಕೊಂಡೊಯ್ಯಲಿದ್ದಾರೆ ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.

ಚಾಲಕನ ನಿಯಂತ್ರಣ ತಪ್ಪಿದ ಬೈಕ್ ರಸ್ತೆ ಮಧ್ಯದ ಡಿವೈಡರ್ ಗೆ ಢಿಕ್ಕಿ ಹೊಡೆದ ಪರಿಣಾಮ ಸವಾರರಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಗರದ ಬಿಕರ್ನಕಟ್ಟೆಯಲ್ಲಿ ರವಿವಾರ ಬೆಳಗ್ಗೆ ನಡೆದಿದ್ದು, ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.

Join Whatsapp
Exit mobile version