ನಾಳೆ ಹುಟ್ಟೂರು ಹೆಗ್ಗವಾಡಿಯಲ್ಲಿ ಧ್ರುವನಾರಾಯಣ ಅಂತ್ಯಕ್ರಿಯೆ

Prasthutha|

ಚಾಮರಾಜನಗರ: ಇಂದು ನಿಧನರಾದ ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್. ಧ್ರುವನಾರಾಯಣ ಅವರ ಅಂತ್ಯಕ್ರಿಯೆ ಭಾನುವಾರ ಅವರ ಹುಟ್ಟೂರು ಹೆಗ್ಗವಾಡಿಯಲ್ಲಿ ನಡೆಯಲಿದೆ.

- Advertisement -


ಹೆಗ್ಗವಾಡಿಯಲ್ಲಿರುವ ಅವರ ತಂದೆ ತಾಯಿ ಸಮಾಧಿ ಪಕ್ಕದಲ್ಲಿ, ಅಂತ್ಯಸಂಸ್ಕಾರ ನಡೆಯಲಿದೆ. ಮೈಸೂರಿನ ಅವರ ಮನೆ, ಕಾಂಗ್ರೆಸ್ ಕಚೇರಿಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸಂಜೆ ಅಲ್ಲಿಂದ ಮೃತದೇಹವನ್ನು ನಂಜನಗೂಡಿಗೆ ತಂದು, ರಾತ್ರಿ ಹುಟ್ಟೂರಿಗೆ ತರಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.



Join Whatsapp