ಎಡಿಜಿಪಿ ಕುಮಾರಸ್ವಾಮಿಯನ್ನು ಹಂದಿ ಎಂದಿದ್ದಾರಾ: ಸಿದ್ದರಾಮಯ್ಯ ಪ್ರಶ್ನೆ

Prasthutha|

ಮೈಸೂರು: ಎಡಿಜಿಪಿ ಚಂದ್ರಶೇಖರ್‌ ಮತ್ತು ಕುಮಾರಸ್ವಾಮಿ ನಡುವೆ ಜಟಾಪಟಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ ಅವರು, ಕುಮಾರಸ್ವಾಮಿಯನ್ನು ಎಡಿಜಿಪಿ ಹಂದಿ ಎಂದು ಕರೆದಿದ್ದಾರಾ? ಇಲ್ಲಾ ತಾನೇ. ಅವರು ಇಂಗ್ಲೀಷ್‌ನ ಬರ್ನಾಡ್ ಶಾರ ವ್ಯಾಕ್ಯವನ್ನ ಉಲ್ಲೇಖಿಸಿದ್ದಾರೆ ಅಷ್ಟೇ ಎಂದು ಹೇಳಿದ್ದಾರೆ.

- Advertisement -

ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿಯನ್ನು ಎಡಿಜಿಪಿ ಹಂದಿ ಎಂದು ಕರೆದಿದ್ದಾರಾ? ಇಲ್ಲಾ ತಾನೇ. ಅವರು ಇಂಗ್ಲೀಷ್‌ನ ಬರ್ನಾಡ್ ಶಾರ ವ್ಯಾಕ್ಯವನ್ನ ಉಲ್ಲೇಖಿಸಿದ್ದಾರೆ ಅಷ್ಟೇ. ಕುಮಾರಸ್ವಾಮಿ ಎಡಿಜಿಪಿ ಮೇಲೆ ಕೆಲವೊಂದಿಷ್ಟು ಆರೋಪ ಮಾಡಿದ್ದರು. ಅದಕ್ಕೆ ಕೆಲವು ಉತ್ತರಗಳನ್ನ ಕೊಟ್ಟಿದ್ದಾರೆ. ಹಂದಿ ಎನ್ನುವ ಪದವನ್ನು ಕುಮಾರಸ್ವಾಮಿ ಅವರಿಗೆ ಬಳಸಿದ್ದಾರೆ ಎಂದು ಹೇಗೆ ಹೇಳುತ್ತೀರಾ? ಎಂದು ಪ್ರಶ್ನಿಸಿದ್ದಾರೆ.

ನಾನು ಈ ವಿಚಾರದ ಬಗ್ಗೆ ಸುದೀರ್ಘ ವಿವರಣೆ ನೀಡುವುದಿಲ್ಲ. ಅದರಲ್ಲೂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯೆ ಕೊಡುವುದಿಲ್ಲ ಎಂದು ಹೇಳಿದ್ದೇನೆ. ಕುಮಾರಸ್ವಾಮಿ ತಪ್ಪು ಮಾಡಿ ಬಿಟ್ಟಿದ್ದಾರೆ. ಹೀಗಾಗಿ ಬೇರೆಯವರ ಮೇಲೆ ಸುಳ್ಳು ಆರೋಪಗಳನ್ನ ಮಾಡುತ್ತಿದ್ದಾರೆ ಅಷ್ಟೇ ಎಂದು ತಿರುಗೇಟು ನೀಡಿದ್ದಾರೆ.

- Advertisement -

ಗ್ಯಾರಂಟಿ ಯೋಜನೆ ಯಾವುದೇ ಕಾರಣಕ್ಕೂ ನಿಲ್ಲಿಸಲ್ಲ. ಎಲ್ಲಿಯವರೆಗೂ ನಿಮ್ಮ ಆಶೀರ್ವಾದ ಇರುತ್ತೆ ಯಾರು ಏನು ಮಾಡಲು ಸಾಧ್ಯವಿಲ್ಲ. ಸ್ವಲ್ಪ ದಿನ ತೊಂದರೆ ಕೊಡಬಹುದು ಅಷ್ಟೇ. ನಾನು ಯಾರಿಗೂ ಹೆದರಲ್ಲ ಜಗಲ್ಲ, ಬಗ್ಗಲ್ಲ. ನನ್ನ ಆತ್ಮಸಾಕ್ಷಿಗೆ ಗೊತ್ತಿದೆ ನಾನು ಕ್ಲಿಯರ್ ಇದ್ದೇನೆ. ಹೆದರುವ ಪ್ರಶ್ನೆಯೇ ಇಲ್ಲ ಎಂದಿದ್ದಾರೆ. ಈ ವೇಳೆ ಸಿಎಂ ಮಾತು ಕೇಳಿ ಹೌದು ಹುಲಿಯಾ ಅಂತ ಜನ ಘೋಷಣೆ ಕೂಗಿದ್ದಾರೆ



Join Whatsapp