Home ಟಾಪ್ ಸುದ್ದಿಗಳು ಬೆಂಗಳೂರು ಉಸ್ತುವಾರಿ ಕೇಳಿಲ್ಲ: ಆರ್.ಅಶೋಕ

ಬೆಂಗಳೂರು ಉಸ್ತುವಾರಿ ಕೇಳಿಲ್ಲ: ಆರ್.ಅಶೋಕ

ಬೆಂಗಳೂರು: ಬೆಂಗಳೂರು ನಗರ ಉಸ್ತುವಾರಿ ವಿಚಾರಕ್ಕೆ ಸಂಬಂಧಿಸಿ ಹಿರಿಯ ಸಚಿವ ಸೋಮಣ್ಣ ಮಾತನಾಡಿರುವುದನ್ನು ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಬೆಂಗಳೂರು ನಗರ ಉಸ್ತುವಾರಿ ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಉಸ್ತುವಾರಿ ನೇಮಕ ಮಾಡುವುದು ಮುಖ್ಯಮಂತ್ರಿಯವರ ವಿವೇಚನೆಗೆ ಬಿಟ್ಟ ವಿಚಾರ. ಈ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಕಂದಾಯ ಸಚಿವ ಆರ್. ಅಶೋಕ ಹೇಳಿದ್ದಾರೆ.


ಈತನಕ ನಾನು ಇದೇ ಜಿಲ್ಲೆಯ ಉಸ್ತುವಾರಿ ಬೇಕೆಂದು ಕೇಳಿಲ್ಲ. ಸಿಎಂ ಸೇರಿದಂತೆ ಯಾರ ಹತ್ತಿರವೂ ಬೇಡಿಕೆ ಇಟ್ಟಿಲ್ಲ. ಹಿಂದೆ ಬೆಂಗಳೂರು ಗ್ರಾಮಾಂತರ ಉಸ್ತುವಾರಿ ಕೊಟ್ಟಿದ್ದರು. ಉತ್ತಮವಾಗಿ ಕೆಲಸ ಮಾಡಿದ್ದೇನೆ. ನಂತರ ಎಂ ಟಿ ಬಿ ನಾಗರಾಜ್ ನನಗೆ ಬೇಕು ಎಂದು ಕೇಳಿದಾಗ ಗ್ರಾಮಾಂತರ ಉಸ್ತುವಾರಿಯನ್ನು ಎಂಟಿಬಿ ಅವರಿಗೆ ಬಿಟ್ಟುಕೊಟ್ಟೆ. ಉಸ್ತುವಾರಿ ಮಂತ್ರಿ ಆಗದೆ ಕೂಡ ಕೆಲಸ ಮಾಡಿದ್ದೇನೆ. ನನ್ನ ಪೂರ್ವ ನಿಯೋಜಿತ ಕಾರ್ಯಕ್ರಮವಿದ್ದುದರಿಂದ ಸಚಿವರು ಶಾಸಕರು ಕರೆದಿದ್ದ ಸಭೆಯಲ್ಲಿ ಭಾಗವಹಿಸಲು ಆಗಲಿಲ್ಲ ಎಂದು ಸ್ಪಷ್ಟಪಡಿಸಿದರು.


ಬೆಂಗಳೂರು ನಗರ ಉಸ್ತುವಾರಿ ವಿಷಯದಲ್ಲಿ ಅಂತಿಮವಾಗಿ ಸಿಎಂ ಬೊಮ್ಮಾಯಿ ನಿರ್ಧಾರಕ್ಕೆ ನಾನು ಬದ್ಧ. ಬೆಂಗಳೂರು ಉಸ್ತುವಾರಿ ಯಾರಿಗೆ ಕೊಟ್ಟರೂ ಅವರ ಜೊತೆಗೆ ಕೆಲಸ ಮಾಡುತ್ತೇನೆ ಎಂದು ಅಶೋಕ ಹೇಳಿದರು.

Join Whatsapp
Exit mobile version