ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೇನಲ್ಲಿ ಅಪಘಾತ : 5 ತಿಂಗಳಲ್ಲಿ ಪ್ರಾಣ ತೆತ್ತವರೆಷ್ಟು?

Prasthutha|

ಮಂಡ್ಯ: ಕೇಂದ್ರ ಸರ್ಕಾರ 9000 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿಯಲ್ಲಿ ನಿರಂತರವಾಗಿ ಡೆಡ್ಲಿ ಆಕ್ಸಿಡೆಂಟ್‌ಗಳು ನಡೆಯುತ್ತಿದ್ದು, ಮಂಡ್ಯ ಜಿಲ್ಲೆ ವ್ಯಾಪ್ತಿಯಲ್ಲಿ ಕೇವಲ 5 ತಿಂಗಳಲ್ಲೆ 55 ಮಂದಿ ಮೃತಪಟ್ಟಿರುವುದಾಗಿ ವರದಿಯಾಗಿದೆ.

- Advertisement -

ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ಮಂಡ್ಯ ಜಿಲ್ಲೆ ವ್ಯಾಪ್ತಿಯಲ್ಲಿಯೇ ಹೆಚ್ಚು ಹಾದು ಹೋಗಿದೆ. ಬರೋಬ್ಬರಿ 55 ಕಿ.ಮೀಗೂ ಹೆಚ್ಚು ಈ ಹೆದ್ದಾರಿ ಇದೆ. ಸದ್ಯ ದಶಪಥ ಹೆದ್ದಾರಿ ಕಾಮಗಾರಿ ಸಂಪೂರ್ಣ ಮುಗಿದಿದ್ದು, ವಾಹನ ಸವಾರರು ಖುಷಿಯಿಂದ ಪ್ರಯಾಣ ಬೆಳೆಸುತ್ತಿದ್ದಾರೆ. ಆದರೆ ಮಂಡ್ಯ ಜಿಲ್ಲಾ ವ್ಯಾಪ್ತಿಯ ದಶಪಥ ಹೆದ್ದಾರಿಯಲ್ಲಿ ನಡೆದಿರುವ ಅಪಘಾತ ಪ್ರಕರಣ ಹಾಗೂ ಅದರಿಂದ ಮೃತಪಟ್ಟವರ ಸಂಖ್ಯೆ ನೋಡಿದರೆ ಜನರಲ್ಲಿ ಆತಂಕ ಮೂಡಿಸುತ್ತಿದೆ.

ಜನವರಿ ತಿಂಗಳಿಂದ ಮೇ ತಿಂಗಳ ಅಂತ್ಯದ ವರೆಗೆ 570 ಅಪಘಾತ ಪ್ರಕರಣ ಸಂಭವಿಸಿದೆ. ಇದರಲ್ಲಿ 55 ಮಂದಿ ಮೃತಪಟ್ಟು, 52 ಮಂದಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಇನ್ನು 184 ಮಂದಿಗೆ ಕೈಕಾಲು ಮುರಿದಿದ್ದು, 279 ಜನರಿಗೆ ಅಪಘಾತದಲ್ಲಿ ಸಣ್ಣ ಪುಟ್ಟ ಗಾಯಗಳಾಗಿದೆ.

- Advertisement -

ಅಪಘಾತಕ್ಕೆ ಅವೈಜ್ಞಾನಿಕವಾಗಿ ಕಾಮಗಾರಿಯು ಕಾರಣ ಎನ್ನುವ ಮಾತುಗಳು ಕೇಳಿಬರುತ್ತಿದೆ. ಮತ್ತೊಂದೆಡೆ ಸರ್ವಿಸ್ ರಸ್ತೆಗಳಲ್ಲಿ ದಿಬ್ಬ ನಿರ್ಮಾಣ ಆಗ್ತಿದ್ದು, ಅಲ್ಲಿಯು ಅಪಘಾತಗಳು ಹೆಚ್ಚಾಗಿ ಸಂಭವಿಸುತ್ತಿದೆ. ಇನ್ನು ಹಲವು ಕಾರಣಗಳಿಂದ ಅಪಘಾತ ದಿನೇ ದಿನೇ ಹೆಚ್ಚಾಗ್ತಿದ್ದು, ಸ್ವಲ್ಪ ಯಾಮಾರಿದ್ರು ಅಪಘಾತ ಕಟ್ಟಿಟ್ಟ ಬುತ್ತಿ ಎನಿಸುತ್ತಿದೆ.

ಒಟ್ಟಿನಲ್ಲಿ ಸವಾರರು ಜಾಗರೂಕರಾಗಿ ವಾಹನ ಚಲಾಯಿಸಬೇಕಿದ್ದು, ಅಪಘಾತಕ್ಕೆ ಜನರಿಂದಲೇ ಕಡಿವಾಣ ಹಾಕಿಕೊಳ್ಳಬೇಕಿದೆ.

Join Whatsapp