ಲಖಿಂಪುರ ಹಿಂಸಾಚಾರದ ತನಿಖೆ ನಡೆಸುತ್ತಿದ್ದ ಡಿಐಜಿ ಉಪೇಂದ್ರ ಕುಮಾರ್ ಅಗರ್ವಾಲ್ ವರ್ಗಾವಣೆ!

Prasthutha|

ಲಖ್ನೋ: ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಪ್ರತಿಭಟಿಸುತ್ತಿದ್ದ ರೈತರ ಮೇಲೆ ಕಾರು ಹರಿಸಿ ಹಲವಾರು ಜೀವಗಳನ್ನು ಬಲಿ ಪಡೆದ ಘಟನೆಯ ಬಗ್ಗೆ ತನಿಖೆ ನಡೆಸುತ್ತಿದ್ದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರನ್ನು ವರ್ಗಾವಣೆ ಮಾಡಲಾಗಿದೆ.

- Advertisement -

ಡಿಐಜಿ ಉಪೇಂದ್ರ ಕುಮಾರ್ ಅಗರ್ವಾಲ್ ವರ್ಗಾವಣೆಯಾದ ಪೊಲೀಸ್ ಅಧಿಕಾರಿಯಾಗಿದ್ದಾರೆ. ಪ್ರಕರಣದ ತನಿಖೆಯ ಮೇಲ್ವಿಚಾರಣೆಯ ಉಸ್ತುವಾರಿಯನ್ನು ಉಪೇಂದ್ರ ಕುಮಾರ್ ವಹಿಸಿದ್ದರು.

ಕೇಂದ್ರ ಸಚಿವ ಅಜಯ್ ಮಿಶ್ರಾ ಸಂಪುಟದಲ್ಲಿ ಇರುವವರೆಗೂ ರೈತರಿಗೆ ನ್ಯಾಯ ಸಿಗಲು ಸಾಧ್ಯವಿಲ್ಲ ಎಂಬ ಕೂಗು ಕೇಳಿ ಬರುತ್ತಿದೆ. ಪ್ರಕರಣದ ತನಿಖೆ ನಡೆಸುತ್ತಿದ್ದ ಪೊಲೀಸ್ ಅಧಿಕಾರಿಯನ್ನು ವರ್ಗಾವಣೆ ಮಾಡಿರುವ ಉತ್ತರಪ್ರದೇಶ ಸರ್ಕಾರದ ನಡೆಯು ಹಲವು ಸಂಶಯಗಳಿಗೆ ಕಾರಣವಾಗಿದೆ.

- Advertisement -


ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕಾರು ಹರಿಸಿ ಒಬ್ಬ ಪತ್ರಕರ್ತ ಸೇರಿದಂತೆ ರೈತರನ್ನು ಹತ್ಯೆಗೈದಿದ್ದನು.

Join Whatsapp