‘ನೆರೆ ನಿರ್ವಹಣೆ ಮಾಡಬೇಕಾದ ಸರ್ಕಾರ ಅಧಿಕಾರದ ಕಿತ್ತಾಟದಲ್ಲಿದೆ’: ದಿನೇಶ್‌ ಗುಂಡೂರಾವ್‌

Prasthutha|

ಬೆಂಗಳೂರು: ರಾಜ್ಯ ನೆರೆ ಸಂಕಷ್ಟದಲ್ಲಿದೆ, ಬಹುತೇಕ ಕಡೆ ಮಹಾಮಳೆಯಿಂದ ಜನ ಜಾನುವಾರುಗಳು ತೊಂದರೆಗೊಳಗಾಗಿವೆ. ಈ ಸಂದರ್ಭದಲ್ಲಿ ನೆರೆ ನಿರ್ವಹಣೆ ಮಾಡಬೇಕಾದ ಸರ್ಕಾರ ಜನರ ಹಿತ ಮರೆತು ಅಧಿಕಾರಕ್ಕಾಗಿ ಕಿತ್ತಾಡುತ್ತಿದೆ ಎಂದು ಮಾಜಿ ಸಚಿವ ದಿನೇಶ್‌ ಗುಂಡೂರಾವ್‌ ಆರೋಪಿಸಿದ್ದಾರೆ.

- Advertisement -

ಈ ಕುರಿತು ಟ್ವೀಟ್‌ ಮಾಡಿರುವ ಅವರು, ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್‌ ಕೋತಿ ಕುಣಿಸುವ ಆಡವಾಡುತ್ತಿದ್ದಾರೆ, ರಾಜ್ಯದ ಬಿಜೆಪಿ ನಾಯಕರು ಕೋತಿಗಳಂತೆ ಕುಣಿಯುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನೆರೆಯಂತಹ ಪ್ರಾಕೃತಿಕ ಭೀಕರ ಸನ್ನಿವೇಶದಲ್ಲಿ ಸರ್ಕಾರ ಜನರ ಬೆನ್ನಿಗೆ ನಿಲ್ಲಬೇಕು. ಆದರೆ, ಬಿಜೆಪಿ ಸರ್ಕಾರದಲ್ಲಿರುವವರು ಸಂಕಷ್ಟದಲ್ಲಿರುವ ಜನರ ಬಗ್ಗೆ ಸೊಲ್ಲು ಎತ್ತುತ್ತಿಲ್ಲ. ಸರ್ಕಾರದಲ್ಲಿರುವವರಿಗೆ ನೆರೆ ನಿರ್ವಹಣೆಗಿಂತ ಸಿಎಂ ಪಟ್ಟಗಳಿಸುವುದು ಹೇಗೆ ಎಂಬುದೇ ಚಿಂತೆಯಾಗಿದೆ. ಇಂತಹ ಹೊಣೆಗೇಡಿ ಸರ್ಕಾರ ಇರುವುದು ಯಾವ ಪುರುಷಾರ್ಥಕ್ಕೆ ಎಂದು ಪ್ರಶ್ನಿಸಿದ್ದಾರೆ.

Join Whatsapp