ಪೊಲೀಸ್ ವಿಚಾರಣೆಗೆ ಹಾಜರಾಗದಿರಲು ದಿನೇಶ್ ಕಲ್ಲಹಳ್ಳಿ ನಿರ್ಧಾರ

Prasthutha|

ಬೆಂಗಳೂರು: ರಮೇಶ್ ಜಾರಕಿಹೊಳಿ ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರ, ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ಪೊಲೀಸರ ವಿಚಾರಣೆಗೆ ಹಾಜರಾಗದಿರಲು ನಿರ್ಧರಿಸಿದ್ದಾರೆ.

- Advertisement -

ರಾಸಲೀಲೆ ಸಿಡಿ ಪ್ರಕರಣಕ್ಕೆ ಸಂಬಂಧಿಸಿ ಹೆಚ್ಚಿನ ಮಾಹಿತಿ ಪಡೆಯಲು ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸರು ದಿನೇಶ್ ಕಲ್ಲಹಳ್ಳಿಗೆ ಇಂದು ವಿಚಾರಣೆಗೆ ಹಾಜರಾಗಬೇಕೆಂದು ತಿಳಿಸಿದ್ದರು. ಆದರೆ ಭದ್ರತೆಯ ಕೊರತೆಯಿಂದ ಇಂದು ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ, ಮಾರ್ಚ್ 9ರಂದು ಹಾಜರಾಗುವುದಾಗಿ ಕಲ್ಲಹಳ್ಳಿ ತಿಳಿಸಿದ್ದಾರೆ.

 “ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ದೂರು ದಾಖಲಿಸಿದ ದಿನದಿಂದ ನನಗೆ ಪದೇ ಪದೆ ಬೆದರಿಕೆ ಕರೆಗಳು ಬರುತ್ತಿದೆ. ನನಗೆ ಜೀವ ಬೆದರಿಕೆಯಿರುವುದರಿಂದಾಗಿ ಸೂಕ್ತವಾದ ಭದ್ರತೆ ಇಲ್ಲದಿರುವ ಕಾರಣ ವಿಚಾರಣೆಗೆ ಇಂದು ಹಾಜರಾಗಲು ಸಾಧ್ಯವಿಲ್ಲ. ಭದ್ರತೆ ಒದಗಿಸಿದರೆ ಮಾರ್ಚ್ 9ರಂದು ವಿಚಾರಣೆಗೆ ಹಾಜರಾಗುತ್ತೇನೆ” ಎಂದು ದಿನೇಶ್ ಕಲ್ಲಹಳ್ಳಿ ಪೊಲೀಸರಿಗೆ ಪತ್ರ ಬರೆದಿದ್ದಾರೆ.

Join Whatsapp