ದಿಶಾ ಸಾಲಿಯಾನ್ ಆತ್ಮಹತ್ಯೆ ಪ್ರಕರಣ: ಕೇಂದ್ರ ಸಚಿವರ ವಿರುದ್ಧ ಕ್ರಮಕ್ಕೆ ಆಗ್ರಹ

Prasthutha|

ಮುಂಬೈ: ದಿವಂಗತ ನಟ ಸುಶಾಂತ್‌ ಸಿಂಗ್‌ ರಜ್‌ಪೂತ್‌ ಅವರ ಮಾಜಿ ವ್ಯವಸ್ಥಾಪಕಿ ದಿಶಾ ಸಾಲಿಯಾನ್‌ ಸಾವಿನ ಕುರಿತು ಸುಳ್ಳು ಸುದ್ದಿ ಹಬ್ಬಿಸುತ್ತಿರುವ ರಾಜಕಾರಣಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಕೆಯ ಪೋಷಕರು ಮಹಾರಾಷ್ಟ್ರ ಮಹಿಳಾ ಆಯೋಗವನ್ನು ಆಗ್ರಹಿಸಿದ್ದಾರೆ.

- Advertisement -

ದಿಶಾ ಪೋಷಕರಾದ ವಸಂತಿ ಮತ್ತು ಸತೀಶ್‌ ಸಾಲಿಯಾನ್‌ ಅವರು ಆಯೋಗದ ಮುಖ್ಯಸ್ಥರಾದ ರೂಪಾಲಿ ಚಕಣಕರ್‌ ಅವರನ್ನು ಭೇಟಿಯಾಗಿ, ತೀರಿಹೋದ ನಮ್ಮ ಮಗಳ ಬಗ್ಗೆ ಮಾಧ್ಯಮಗಳಲ್ಲಿ ಪ್ರಕಟ ಆಗುತ್ತಿರುವ ಅವಹೇಳನಕಾರಿ ಸುಳ್ಳು ಸುದ್ದಿಗಳಿಂದ ನಾವು ಸಮಾಜದಲ್ಲಿ ತಲೆ ಎತ್ತಿ ಬದುಕಲು ಸಾಧ್ಯವಾಗುತ್ತಿಲ್ಲ. ಇದಕ್ಕೆ ಕಾರಣರಾದ ಕೇಂದ್ರ ಸಚಿವ ನಾರಾಯಣ ರಾಣೆ ಮತ್ತು ಆತನ ಪುತ್ರ ನಿತೀಶ್‌ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

2020ರ ಜೂನ್‌ ತಿಂಗಳಲ್ಲಿ ಸುಶಾಂತ್‌ ಸಿಂಗ್‌ ರಜ್‌ಪೂತ್‌ ಆತ್ಮಹತ್ಯೆ ಮಾಡಿಕೊಳ್ಳುವ ಆರು ದಿನ ಮೊದಲು ದಿಶಾ ಸಾಲಿಯಾನ್‌ ಆತ್ಮಹತ್ಯೆ ಮಾಡಿಕೊಂಡಿದ್ದರು.



Join Whatsapp