ಅ.2ರಿಂದ ಕೇಂದ್ರ ಸರ್ಕಾರದಿಂದ ದೂರುಗಳ ವಿಲೇವಾರಿ

Prasthutha|

ಹೊಸದಿಲ್ಲಿ:  ಅ.2ರಿಂದ ಒಂದು ತಿಂಗಳ ಒಳಗೆ ಎಲ್ಲ ಸಚಿವಾಲಯಗಳಲ್ಲಿ ಬಾಕಿ ಉಳಿದಿರುವ ದೂರುಗಳನ್ನು ಇತ್ಯರ್ಥಗೊಳಿಸಲು ಕೇಂದ್ರ ಸರ್ಕಾರ ಮುಂದಾಗಿದೆ.

- Advertisement -

ಸಂಸತ್‌ ಸದಸ್ಯರು, ರಾಜ್ಯ ಸರಕಾರಗಳಿಂದ ದೂರು ವಿಲೇವಾರಿ,  ಸಂಸದೀಯ ಸಮಿತಿಗಳು ನೀಡಿದ ಭರವಸೆಗಳ ಬಾಕಿ ಅನುಷ್ಠಾನ, ಸಾರ್ವಜನಿಕರು ಸಲ್ಲಿಸಿರುವ ದೂರುಗಳನ್ನು ಇತ್ಯರ್ಥಗೊಳಿಸಲು ವಿಶೇಷ ಆಂದೋಲನ ನಡೆಸಲು ನಿರ್ಧರಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಕೇಂದ್ರ ಸಂಪುಟ ಕಾರ್ಯದರ್ಶಿ ರಾಜೀವ್‌ ಗೌಬಾ ಎಲ್ಲ ಸಚಿವಾಲಯಗಳ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ಆಂದೋಲನವನ್ನು ಯಶಸ್ವಿಗೊಳಿಸಲು ಅಗತ್ಯ ಕ್ರಮಗಳನ್ನುಕೈಗೊಳ್ಳಬೇಕು ಎಂದು ಸೂಚಿಸಿದ್ದಾರೆ.

- Advertisement -

ಕೇಂದ್ರ ಸರಕಾರದ ಸಿಬಂದಿ, ಸಾರ್ವಜನಿಕ ಕುಂದುಕೊರತೆಗಳು ಮತ್ತು ಪಿಂಚಣಿ ಸಚಿವಾಲಯದ ಮೂಲಕ ಸರಕಾರಕ್ಕೆ ಸಲ್ಲಿಕೆಯಾಗುವ ಸಲಹೆ-ದೂರುಗಳನ್ನು ಇತ್ಯರ್ಥಗೊಳಿಸಲಾಗುತ್ತದೆ. ಈ ಉದ್ದೇಶಕ್ಕಾಗಿ ಸೆ. 13ರಿಂದಲೇ ಎಲ್ಲ ಸಚಿವಾಲಯಗಳಲ್ಲಿ ಯಾವ ರೀತಿಯ ದೂರುಗಳನ್ನು ಇತ್ಯರ್ಥಪಡಿಸಬೇಕು ಎಂಬ ಬಗ್ಗೆ ಪರಾಮರ್ಶೆ ನಡೆಯುತ್ತಿದೆ. ಸೆ. 29ರ ವರೆಗೆ ಈ ಪ್ರಕ್ರಿಯೆ ನಡೆಯಲಿದೆ.

Join Whatsapp