ಅಕ್ರಮ ಆಸ್ತಿ ಗಳಿಕೆ ಪ್ರಕರಣ: ಡಿಕೆ ಶಿವಕುಮಾರ್’ಗೆ ಬಿಗ್ ರಿಲೀಫ್

Prasthutha|

►ಸಿಬಿಐ, ಯತ್ನಾಳ್ ಅರ್ಜಿ ವಜಾ

- Advertisement -


ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲ್ಲಿಸಿದ್ದ ಅರ್ಜಿಗಳನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.


ರಾಜ್ಯ ಸರ್ಕಾರ, ಸಿಬಿಐ ನಡುವಿನ ವಿವಾದವಾಗಿದೆ. ಹೀಗಾಗಿ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ವಿಚಾರಣೆ ಸೂಕ್ತ. ಸರ್ಕಾರ, ಸಿಬಿಐ ನಡುವಿನ ವಿವಾದ ಸುಪ್ರೀಂಕೋರ್ಟ್ ತೀರ್ಮಾನಿಸಬೇಕು. ಹೈಕೋರ್ಟ್ ತೀರ್ಮಾನಿಸುವುದು ಸೂಕ್ತವಲ್ಲವೆಂದು ನ್ಯಾಯಮೂರ್ತಿ . ಕೆ.ಸೋಮಶೇಖರ್, ನ್ಯಾಯಮೂರ್ತಿ ಉಮೇಶ್ ಎಂ.ಅಡಿಗ ಅವರ ಪೀಠ ತೀರ್ಪು ನೀಡಿದೆ. ಇದರೊಂದಿಗೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.

- Advertisement -

ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಹಿಂಪಡೆದಿರುವುದನ್ನು ಪ್ರಶ್ನಿಸಿ ಸಿಬಿಐ ಮತ್ತು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿದ್ದರು.



Join Whatsapp
Exit mobile version