ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯ; ಗೋವಾ ರಸ್ತೆ ಬಂದ್ ಮಾಡಿ ಪ್ರತಿಭಟನೆ

Prasthutha|

ಧಾರವಾಡ: ಕಳೆದ 10 ದಿನಗಳಿಂದ ಕುಡಿಯುವ ನೀರು ಪೂರೈಸದ ಹಿನ್ನೆಲೆಯಲ್ಲಿ ಸಾಧನಕೇರಿ ಸೇರಿದಂತೆ ವಿವಿಧ ಏರಿಯಾ ನಿವಾಸಿಗಳು ಗೋವಾ ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ.

- Advertisement -


ಎಲ್‌ ಆ್ಯಂಡ್ ಟಿ ಕಂಪನಿಗೆ ಜಲಮಂಡಳಿ ನಿರ್ವಹಣೆ ಜವಾಬ್ದಾರಿ ವಹಿಸಿದಾಗಿನಿಂದ ಹುಬ್ಬಳ್ಳಿ, ಧಾರವಾಡ ಅವಳಿ ನಗರದ ಜನತೆ ಕುಡಿಯುವ ನೀರಿಗಾಗಿ ಪರಿತಪಿಸುವಂತಾಗಿದೆ ಎಂದು ಸ್ಥಳೀಯರು ಅಳಲು ತೋಡಿಕೊಂಡಿದ್ದಾರೆ.


ಎಲ್ ಆ್ಯಂಡ್ ಟಿ ಕಂಪೆನಿ ವಿರುದ್ಧ ಧಿಕ್ಕಾರ ಕೂಗಿದ ಸಾರ್ವಜನಿಕರು ಮಹಾನಗರ ಪಾಲಿಕೆ ಕೂಡಲೇ ಕುಡಿಯುವ ನೀರನ್ನು ಪೂರೈಕೆ ಮಾಡಬೇಕು. ಈಗಾಗಲೇ ಎಲ್ಲ ಕಡೆ ಕುಡಿಯುವ ನೀರಿಗಾಗಿ ಜನ ತೊಂದರೆಗೀಡಾಗಿದ್ದಾರೆ, ಜನ ರೊಚ್ಚಿಗೇಳುವ ಮುನ್ನ ಮಹಾನಗರ ಪಾಲಿಕೆ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

Join Whatsapp