Home ಟಾಪ್ ಸುದ್ದಿಗಳು ಅಶಕ್ತರ ಮನೆ ಬಾಗಿಲಿಗೆ ಪಿಂಚಣಿ ಸೌಲಭ್ಯ ವಿತರಣೆ: ಸಚಿವ ಆರ್.ಅಶೋಕ

ಅಶಕ್ತರ ಮನೆ ಬಾಗಿಲಿಗೆ ಪಿಂಚಣಿ ಸೌಲಭ್ಯ ವಿತರಣೆ: ಸಚಿವ ಆರ್.ಅಶೋಕ

ಬೆಳಗಾವಿ: ರಾಜ್ಯದಲ್ಲಿ ಸಾಮಾಜಿಕ ಭದ್ರತಾ ಯೋಜನೆಯಡಿ ಈಗಾಗಲೇ 27 ಲಕ್ಷಕ್ಕೂ ಅಧಿಕ ಫಲಾನುಭವಿಗಳಿಗೆ ಅಂಚೆ ಕಚೇರಿ ಮೂಲಕ ಪಿಂಚಣಿ ಒದಗಿಸಲಾಗುತ್ತಿದ್ದು, ಅಶಕ್ತರಿಗೆ ಮನೆ ಬಾಗಿಲಿಗೆ ಪಿಂಚಣಿ ಸೌಲಭ್ಯ ತಲುಪಿಸಲು ಸರ್ಕಾರ ಬದ್ಧವಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಸೋಮವಾರ ವಿಧಾನಸಭೆಯಲ್ಲಿ ಶಾಸಕ ಬಂಡೆಪ್ಪ ಖಾಶೆಂಪೂರ್ ಅವರ ಪ್ರಶ್ನೆಗೆ ಉತ್ತರಿಸಿ, ಮಧ್ಯವರ್ತಿಗಳ ಹಾವಳಿಯನ್ನು ತಪ್ಪಿಸಲು ಸರ್ಕಾರ ನೇರವಾಗಿ ಪಿಂಚಣಿಯನ್ನು ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆಯನ್ನು ಆರಂಭಿಸಲಾಗಿದೆ. ಅಂಚೆ ಕಚೇರಿಯಲ್ಲಿ ಖಾತೆಯನ್ನು ತೆರೆದು, ಮನೆ ಬಾಗಿಲಿಗೆ ಪಿಂಚಣಿ ಒದಗಿಸಲು ಮನವಿ ಸಲ್ಲಿಸಿದರೆ ಈ ಸೌಲಭ್ಯವನ್ನು ಕಲ್ಪಿಸಲಾಗುವುದು ಎಂದರು.

ರಾಜ್ಯದಲ್ಲಿ ಬೋಗಸ್ ಕಾರ್ಡ್ ಗಳನ್ನು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದ್ದು, ಕಳೆದ ವರ್ಷ 4 ಲಕ್ಷ ಬೋಗಸ್ ಕಾರ್ಡುಗಳನ್ನು ರದ್ದುಪಡಿಸಿರುವುದರಿಂದ 475 ಕೋಟಿ ರೂ.ಉಳಿತಾಯವಾಗಿದೆ. ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟ ಬಿಪಿಎಲ್ ಪಡಿತರದಾರರ ಮಾಹಿತಿ ಲಭ್ಯವಿದ್ದು, ಅಂತವರಿಗೆ ನೇರವಾಗಿ ಪಿಂಚಣಿ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವರು ತಿಳಿಸಿದರು.

Join Whatsapp
Exit mobile version