ಜಿಲ್ಲೆಯ ಪಿ. ಎಫ್. ಐ  ಸಂಘಟನೆಗಳ ವಿರುದ್ಧ ತನಿಖಾ ಸಂಸ್ಥೆಗಳ ಧಾಳಿ : ಮುಸ್ಲಿಮ್ ಒಕ್ಕೂಟ ಖಂಡನೆ: ಕೆ.ಅಶ್ರಫ್

Prasthutha|

ಮಂಗಳೂರು: ರಾಷ್ಟ್ರ ಮಟ್ಟದ ಸಂಘಟನೆಗಳ  ಕಚೇರಿಗಳ ಮೇಲೆ ಧಾಳಿ ನಡೆಸಿ ಪದಾಧಿಕಾರಿಗಳನ್ನು ವಶಪಡಿಸಿದ, ಕೇಂದ್ರ ಸರಕಾರ ಪ್ರೇರಿತ ಎನ್.ಐ. ಎ ದಾಳಿಯು ತೀವ್ರ ಖಂಡನೀಯ. ಇದು ಪ್ರಜಾತಂತ್ರ ವ್ಯವಸ್ಥೆಯಲ್ಲಿ ಸಂಘಟನೆಗಳ ಅಸ್ತಿತ್ವವನ್ನು ಇಲ್ಲದಾಗಿಸುವ ದಬ್ಬಾಳಿಕೆಯ  ಕ್ರಮವಾಗಿದೆ ಎಂದು ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಅಧ್ಯಕ್ಷರಾದ ಕೆ.ಅಶ್ರಫ್ ಹೇಳಿದ್ದಾರೆ.

- Advertisement -

ದೇಶಾದ್ಯಂತ ಪಿ. ಎಫ್. ಐ   ಸಂಘಟನೆಯ ಕಚೇರಿ ಮತ್ತು ನಾಯಕರ ಮನೆಗಳ ಮೇಲೆ ದಾಳಿ ಮಾಡಿದ ಎನ್.ಐ. ಎ ದಾಳಿ ಕುರಿತು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ ಅಶ್ರಫ್, ರಾಜ್ಯ ಸರಕಾರದ ಅಧೀನದ ತನಿಖಾ ಸಂಸ್ಥೆಗಳು ತನಿಖೆ ಮಾಡಬೇಕಾದ ಪ್ರಕರಣಗಳನ್ನು ರಾಷ್ಟ್ರೀಯ ಮಟ್ಟದ ಸಂಸ್ಥೆಗೆ ವಹಿಸಿ ಕೊಟ್ಟು, ಪರೋಕ್ಷ ಲಾಭ ಪಡೆಯುವ ಉದ್ದೇಶ ಇದಾಗಿದೆ. ಕೇಂದ್ರ ಸರಕಾರ ತನಿಖಾ ಸಂಸ್ಥೆಗಳನ್ನು ತನ್ನ ಮೂಗಿನ ನೇರಕ್ಕೆ ಬಳಸಿ ದ್ವೇಷ ಸಾಧಿಸುವ ಪ್ರಯತ್ನ ನಡೆಸುತ್ತಿದೆ. ಇದು ಪ್ರಜಾ ಪ್ರಭುತ್ವದ ಮಹಾ ಕಗ್ಗೊಲೆ ಆಗಿದೆ ಎಂದು ಹೇಳಿದರು.

ಕೇಂದ್ರ ಸರ್ಕಾರದ ತನಿಖಾ ಏಜೆನ್ಸಿಗಳು ನಡೆಸಿದ ಹಲವಾರು ಕ್ರಮಗಳ ಹಿನ್ನೆಲೆಯಲ್ಲಿ, ಅದರಲ್ಲೂ ವಿಶೇಷವಾಗಿ ಪಿ. ಎಫ್.ಐ ವಿರುದ್ಧದ ಕಾರ್ಯಾಚರಣೆಯು ಸಾಕಷ್ಟು ಅನುಮಾನಾಸ್ಪದವಾಗಿದೆ  ತನಿಖಾ ಸಂಸ್ಥೆಗಳು ಪೂರಕವಾದ ಮತ್ತು ಸ್ಪಷ್ಟವಾದ ಪುರಾವೆಗಳನ್ನು ಪ್ರದರ್ಶಿಸದ ಹೊರತಾಗಿ ಇಂತಹ ಸಂಘಟನೆಗಳ ತನಿಖೆಗೆಗಳು, ವಿಭಿನ್ನ ಸಂದೇಶ ರವಾನಿಸುತ್ತದೆ. ತನಿಖೆಗಳು ಪಕ್ಷಪಾತವಿಲ್ಲದ ಮತ್ತು ರಾಜಕೀಯ ಪ್ರೇರಣೆಯಿಂದ ಮುಕ್ತವಾಗಿರಬೇಕು ಎಂದು ಅವರು ತಿಳಿಸಿದರು.

- Advertisement -

ದ್ವೇಷ , ಪ್ರಚೋದನೆ, ವಿದ್ವಂಸಕತೆ ಮತ್ತು ಹಿಂಸಾಚಾರದಲ್ಲಿ ಬಹಿರಂಗವಾಗಿ ತೊಡಗಿರುವ ಹಲವಾರು ಗುಂಪುಗಳ ವಿರುದ್ಧ ಕ್ರಮ ಕೈಗೊಳ್ಳದಿರುವ ಕಾರಣ ತನಿಖಾ ಸಂಸ್ಥೆಗಳ ಈ ನಡೆ ಪ್ರಶ್ನಾರ್ಹವಾಗುತ್ತದೆ. ಆದ್ದರಿಂದ, ಈ ದಾಳಿಗಳು ಸಮಾಜಕ್ಕೆ ಅಹಿತಕರ ಘಟನೆಗಳನ್ನು ಹುಟ್ಟುಹಾಕುತ್ತವೆ.ಆದ್ದರಿಂದ ಜನರು, ಪ್ರತಿಪಕ್ಷಗಳು, ಅಲ್ಪಸಂಖ್ಯಾತರು ಅಥವಾ ಸಮಾಜದ ಯಾವುದೇ ಸಾಮಾಜಿಕ ವರ್ಗಕ್ಕೆ ಸೇರಿದವರಾಗಿದ್ದರೂ ಅನ್ಯಾಯದ ರೀತಿಯಲ್ಲಿ ಕಿರುಕುಳಕ್ಕೆ ಒಳಪಡಿಸುವ ಸರ್ವ ಕಾರ್ಯಾಚರಣೆ ದಾಳಿಗಳು ಮತ್ತು ಕ್ರಮಗಳನ್ನು ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಬಲವಾಗಿ ಖಂಡಿಸುತ್ತದೆ ಎಂದು ಹೇಳಿದರು.

ಕೇಂದ್ರ ಸರಕಾರವನ್ನು ಆಳುವ ಬಿ.ಜೆ.ಪಿ ಗೆ ಹಾಲಿ ಯಾವುದೇ ಅಭಿವೃದ್ಧಿ ಕಾರ್ಯಗಳು ಶೂನ್ಯವಾದ ಈ ಸಂದರ್ಭದಲ್ಲಿ ಸಂಘಟನೆಗಳನ್ನು ನಿಷೇಧ ಮಾಡುವ ಪ್ರಚಾರ ಪಡೆದು,ಭಿನ್ನ ಜನಾಂಗದ ಜನರನ್ನು ಭಾವನೆಗಳ ಮೂಲಕ ತೃಪ್ತಿ ಪಡಿಸುವ ಷಡ್ಯಂತ್ರದ ಭಾಗವಾಗಿ ಈ ಧಾಳಿಗಳು ಬಳಕೆಯಾಗಿ, ಮುಂದಿನ ಅವಧಿಗೆ ಅಧಿಕಾರ ಪಡೆಯುವ ಪ್ರಯತ್ನ ನಡೆಸುತ್ತಿದೆ.ಇದು ಖಂಡನೀಯ  ಎಂದು ಅಶ್ರಫ್ ಹೇಳಿದ್ದಾರೆ.

Join Whatsapp