ಡಿಜೆ ಹಳ್ಳಿ, ಕೆಜೆ ಹಳ್ಳಿ ಗಲಭೆಯಲ್ಲಿ ಸಂಪತ್ ರಾಜ್ ಪಾತ್ರವಿಲ್ಲ : ಡಿಕೆಶಿ

Prasthutha|

ಬೆಂಗಳೂರು : ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡು ಹೊರ ಬಂದ ಮಾಜಿ ಮೇಯರ್ ಸಂಪತ್ ರಾಜ್ ನಿಂದ ತಮಗೆ ಜೀವಭಯವಿದೆ ಎಂಬುದಾಗಿ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಹೇಳಿದ್ದರು. ಇದರ ಬೆನ್ನಲ್ಲೇ, ಈ ಗಲಭೆ ಪ್ರಕರಣದಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ಪಾತ್ರವಿಲ್ಲ. ಅವರ ವಿರುದ್ಧ ಪಕ್ಷದಿಂದ ಯಾವುದೇ ಶಿಸ್ತುಕ್ರಮ ಕೂಡ ಕೈಗೊಳ್ಳುವ ಪ್ರಶ್ನೆಯೇ ಇಲ್ಲ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

- Advertisement -

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ನಮ್ಮ ಪಕ್ಷದ ವರದಿಗಳನ್ನು ನೋಡಿದ್ದೇನೆ. ಬಿಜೆಪಿಯವರು ರಾಜಕೀಯಕ್ಕೆ ಹೇಳ್ತಾರೆ ಬಿಡಿ. ಆದ್ರೇ ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ಪ್ರಕರಣದಲ್ಲಿ ಯಾವುದೇ ಒಬ್ಬ ಕಾಂಗ್ರೆಸ್ಸಿಗರ ಪಾತ್ರವಿಲ್ಲ. ಗಲಭೆಯಲ್ಲಿ ಮಾಜಿ ಮೇಯರ್ ಸಂಪತ್ ರಾಜ್ ರ ಪಾತ್ರವೂ ಇಲ್ಲ. ಹೀಗಾಗಿ ಸಂಪತ್ ವಿರುದ್ಧ ಶಿಸ್ತು ಕ್ರಮದ ಪ್ರಶ್ನೆಯೇ ಇಲ್ಲ ಎಂಬುದಾಗಿ ತಿಳಿಸಿದ್ದಾರೆ.

Join Whatsapp