‘ಅನ್ನಭಾಗ್ಯ’ ಯೋಜನೆಗೆ ಅಕ್ಕಿ ಪೂರೈಕೆ ನಿರಾಕರಣೆ| ಜೂ.20ಕ್ಕೆ ಕೇಂದ್ರದ ವಿರುದ್ಧ ದ.ಕ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

Prasthutha|

ಮಂಗಳೂರು : ಕರ್ನಾಟಕ ರಾಜ್ಯ ಸರಕಾರದ ಪ್ರತಿಷ್ಠಿತ ‘ಅನ್ನಭಾಗ್ಯ’ ಯೋಜನೆಗೆ ಅಕ್ಕಿ ಪೂರೈಕೆ ಮಾಡಲು ನಿರಾಕರಿಸಿದ ಕೇಂದ್ರ ಬಿಜೆಪಿ ಸರಕಾರದ ದ್ವೇಷ ರಾಜಕಾರಣ ಹಾಗೂ ಬಡವರ ವಿರೋಧಿ ನೀತಿಯನ್ನು ಖಂಡಿಸಿ ದ.ಕ.ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ಜೂ.20ರಂದು (ಮಂಗಳವಾರ) ಬೆಳಗ್ಗೆ 10:30ಕ್ಕೆ ಮಂಗಳೂರಿನ ಮಿನಿವಿಧಾನ ಸೌಧದ ಎದುರು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

- Advertisement -

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಕೆ ಹರೀಶ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ನಡೆಯುವ ಪ್ರತಿಭಟನೆಯಲ್ಲಿ ಕರ್ನಾಟಕ ರಾಜ್ಯ ಘನ ಸರಕಾರದ ಅರೋಗ್ಯ ಹಾಗೂ ದ. ಕ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಭಾಗವಹಿಸುವರು.

ಜಿಲ್ಲೆಯ ಶಾಸಕರು, ಮಾಜಿ ಶಾಸಕರು, ಸಂಸದರು, ಸಚಿವರು, ಜಿಲ್ಲಾ ಕಾಂಗ್ರೆಸ್ ನಾಯಕರು ಭಾಗವಹಿಸುವರು ಎಂದು ಜಿಲ್ಲಾ ಕಾಂಗ್ರೆಸ್ ಕಚೇರಿ ಕಾರ್ಯದರ್ಶಿ ನಝೀರ್ ಬಜಾಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Join Whatsapp