Home ಟಾಪ್ ಸುದ್ದಿಗಳು ಆಟೋ ಚಾಲಕನ ಮೇಲೆ ಅನೈತಿಕ ಪೋಲಿಸ್ ಗಿರಿ: ಆಸ್ಪತ್ರೆಗೆ ಭೇಟಿ ನೀಡಿದ ದ.ಕ ಜಿಲ್ಲಾ ಕಾಂಗ್ರೆಸ್...

ಆಟೋ ಚಾಲಕನ ಮೇಲೆ ಅನೈತಿಕ ಪೋಲಿಸ್ ಗಿರಿ: ಆಸ್ಪತ್ರೆಗೆ ಭೇಟಿ ನೀಡಿದ ದ.ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಮುಖಂಡರು

ಮಂಗಳೂರು: ಧರ್ಮಸ್ಥಳ ಬಸ್ ನಿಲ್ದಾಣಕ್ಕೆ ಬಾಡಿಗೆ ಹೋಗಿದ್ದ ಉಜಿರೆ ಆಟೋ ಚಾಲಕ ಮಹಮ್ಮದ್ ಅಶಿಕ್ ತನ್ನ ಅಟೋದಲ್ಲಿ ಹೋಗಿ ಬರುವ ಸಂದರ್ಭದಲ್ಲಿ ನಾಲ್ಕು ಜನರ ತಂಡ ಯದ್ವಾ ತದ್ವಾ ಹಲ್ಲೆ ಗೈದಿದ್ದು ಮಾರಣಾಂತಿಕ ಹಲ್ಲೆಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಇವರನ್ನು ದ. ಕ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷರಾದ ಕೆ ಕೆ ಶಾಹುಲ್ ಹಮೀದ್ ಮತ್ತು ಕಾಂಗ್ರೆಸ್ ಮುಖಂಡರಾದ ಬಿ ಎ ನಝೀರ್ ಆಸ್ಪತ್ರೆಗೆ ಭೇಟಿ ಕೊಟ್ಟು ಆರೋಗ್ಯ ವಿಚಾರಿಸಿದರು.


ಅಲ್ಲದೆ, ಸಂಬಂಧ ಪಟ್ಟ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿ ಶೀಘ್ರವಾಗಿ ಆರೋಪಿಗಳನ್ನು ಬಂಧಿಸಿ ಕಠಿಣವಾದ ಕಾನೂನುಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

Join Whatsapp
Exit mobile version