ರಾಜ್ಯಪಾಲರ ವಿರುದ್ಧ ಮತ್ತೆ ಹೋರಾಟಕ್ಕೆ ಡಿಕೆಶಿ ಕರೆ: ಆ.31ರಂದು ರಾಜಭವನ ಚಲೋ

Prasthutha|

ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರ ವಿರುದ್ಧ ಮತ್ತೆ ಹೋರಾಟಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕರೆ ನೀಡಿದ್ದಾರೆ.

- Advertisement -


ಕೆಪಿಸಿಸಿ ಕಚೇರಿಯಲ್ಲಿ ಇಂದು (ಮಂಗಳವಾರ) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಆ.31ರಂದು ರಾಜಭವನ ಚಲೋಗೆ ಕರೆ ನೀಡಿ, ವಿಧಾನಸೌಧದ ಗಾಂಧಿ ಪ್ರತಿಮೆಯಿಂದ ರಾಜಭವನಕ್ಕೆ ಹೋಗಿ ಯಾವ ಯಾವ ಪೆಂಡಿಂಗ್ ಪ್ರಾಸಿಕ್ಯೂಷನ್ ಇದೆ ಅದನ್ನು ಜಾರಿಗೆ ತರಬೇಕು ಎಂದು ಮನವಿ ಸಲ್ಲಿಸುತ್ತೇವೆ.

ಈ ಹಿನ್ನಲೆ ಎಲ್ಲ ಶಾಸಕರು, ಸಚಿವರು, ಪರಿಷತ್ ಸದಸ್ಯರು ಭಾಗಿಯಾಗಬೇಕು ಎಂದು ಸೂಚನೆ ನೀಡಿದ್ದಾರೆ.



Join Whatsapp