ಡಿಕೆ ಶಿವಕುಮಾರ್ ಕಾವೇರಿ ನೀರನ್ನು ಕಳ್ಳತನ ಮಾಡಿ ಕರ್ನಾಟಕದ ರೈತರಿಗೆ ದ್ರೋಹವೆಸಗಿದ್ದಾರೆ: ಕೆಎಸ್ ಈಶ್ವರಪ್ಪ

Prasthutha|

ಶಿವಮೊಗ್ಗ: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕಾವೇರಿ ನೀರನ್ನು ಕಳ್ಳತನ ಮಾಡಿ ಕರ್ನಾಟಕದ ರೈತರಿಗೆ ದ್ರೋಹವೆಸಗಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಕಿಡಿಕಾರಿದ್ದಾರೆ.

- Advertisement -

ಶಿವಮೊಗ್ಗದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಈಶ್ವರಪ್ಪ, ಶಿವಕುಮಾರ್ ಕಾವೇರಿ ನೀರನ್ನು ನೇರವಾಗಿ ಕಳ್ಳತನ ಮಾಡಿ ಕಾವೇರಿ ಜಲಾನಯನ ಪ್ರದೇಶದ ರೈತರಿಗೆ ದ್ರೋಹವೆಸಗಿದ್ದಾರೆ ಎಂದು ಹೇಳಿದರು. ಕಾಂಗ್ರೆಸ್ ಪಕ್ಷದ ನೇತೃತ್ವದಲ್ಲಿ 26 ರಾಜಕೀಯ ಪಕ್ಷಗಳು ರಚಿಸಿಕೊಂಡಿರುವ ಇಂಡಿಯಾ ಮೈತ್ರಿಕೂಟದ ಭಾಗವಾಗಿರುವ ಡಿಎಂಕೆ ಪಕ್ಷ ನೇತೃತ್ವದ ತಮಿಳುನಾಡು ಸರ್ಕಾರಕ್ಕೆ ಅಸಮಾಧಾನ ಉಂಟಾಗದಿರಲು ಶಿವಕುಮಾರ್ ನೆರೆರಾಜ್ಯಕ್ಕೆ ನೀರು ಬಿಡುತ್ತಲೇ ಹೋಗಿದ್ದಾರೆ. ಬಿಜೆಪಿ ಕಾರ್ಯಕರ್ತರು ಮತ್ತು ರೈತ ಸಂಘಟನೆಗಳು ಉಗ್ರ ರೂಪದ ಹೋರಾಟ ನಡೆಸಿದ ಬಳಿಕ ಎಚ್ಚೆತ್ತುಕೊಂಡ ಶಿವಕುಮಾರ್ ಈಗ ದೆಹಲಿಗೆ ಹೋಗಿ ಸಂಸದರೊಂದಿಗೆ ಸಭೆ ನಡೆಸಿದ್ದಾರೆ ಎಂದು ಈಶ್ವರಪ್ಪ ಹೇಳಿದರು.

ಶಿವಕುಮಾರ್ ಹೇಳೋದೊಂದು ಮಾಡೋದೊಂದು, ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸುವುದೊಂದೇ ಅವರ ಗುರಿಯಾಗಿದೆ ಎಂದು ಅವರು ಹೇಳಿದರು.

Join Whatsapp