ಕಾಂಗ್ರೆಸ್ ಕಾರ್ಯಕರ್ತನಿಗೆ ಟ್ರಬಲ್ ಶೂಟರ್ ನಿಂದ ಏಟು | ರೌಡಿ ಡಿಕೆಶಿಯೆಂದು ವ್ಯಂಗ್ಯವಾಡಿದ ಬಿಜೆಪಿ

Prasthutha|

ಬೆಂಗಳೂರು : ಹೆಗಲ ಮೇಲೆ ಕೈ ಹಾಕಿದ ಕಾಂಗ್ರೆಸ್‌ ಕಾರ್ಯಕರ್ತನಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಏಟು ಕೊಟ್ಟ ಘಟನೆಗೆ ಸಂಬಂಧಿಸಿದಂತೆ ಬಿಜೆಪಿ ವ್ಯಂಗ್ಯವಾಡಿದ್ದು, “ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ರೌಡಿ ಕೊತ್ವಾಲನೊಂದಿಗಿದ್ದ ಗತಕಾಲದ ನೆನಪು ಕಾಡಿತೇ?” ಎಂದಿದೆ.

- Advertisement -

ಇನ್ನು ಈ ಬಗ್ಗೆ ಟ್ವೀಟ್‌ ಮಾಡಿರುವ ಬಿಜೆಪಿ, “ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ರೌಡಿ ಕೊತ್ವಾಲನೊಂದಿಗಿದ್ದ ಗತಕಾಲದ ನೆನಪು ಕಾಡಿತೇ? ಒಂದು ರಾಷ್ಟ್ರೀಯ ಪಕ್ಷದ ರಾಜ್ಯ ಅಧ್ಯಕ್ಷನಾಗಿದ್ದುಕೊಂಡು ಸಾರ್ವಜನಿಕವಾಗಿ ಒಬ್ಬ ವ್ಯಕ್ತಿಯ ಮೇಲೆ ಈ ರೀತಿ ಹಲ್ಲೆ ಮಾಡಿರುವುದು ಅಕ್ಷಮ್ಯ” ಎಂದು ಹೇಳಿದೆ.

“ಸಾರ್ವಜನಿಕ ಜೀವನದಲ್ಲಿದ್ದುಕೊಂಡು ಒಬ್ಬ ವ್ಯಕ್ತಿಯ ಮೇಲೆ ಸಾರ್ವಜನಿಕವಾಗಿ, ಮಾಧ್ಯಮಗಳ ಎದುರು ಹಲ್ಲೆ ಮಾಡುವುದು ಡಿ.ಕೆ.ಶಿವಕುಮಾರ್‌ ಅವರ ಉಗ್ರ ಮನಸ್ಥಿತಿಯನ್ನು ತೋರಿಸುತ್ತಿದೆ. ಈ ಹಿಂದೆ ಸೆಲ್ಫಿ ತೆಗೆಯಲು ಬಂದ ಕಾರ್ಯಕರ್ತನ ಮೇಲೆ ಡಿಕೆಶಿ ಹಲ್ಲೆ ಮಾಡಿದ್ದರು. ಡಿಕೆಶಿಯವರೇ, ನೀವು ರಾಜಕಾರಣಿಯೋ ಅಥವಾ ರೌಡಿಯೋ!?” ಎಂದು ಪ್ರಶ್ನಿಸಿದೆ.

- Advertisement -

“ಕಾರ್ಯಕರ್ತ ಹತ್ತಿರ ಬಂದ ಎಂಬ ಕಾರಣಕ್ಕೆ ಸಾರ್ವಜನಿಕವಾಗಿ ಹಲ್ಲೆ ಮಾಡುವ ಡಿ.ಕೆ.ಶಿವಕುಮಾರ್‌ ಅವರ ಬಳಿ ಜನಸಾಮಾನ್ಯರು ಹೋದರೆ ಗತಿಯೇನು ? ಕೆಪಿಸಿಸಿ ಅಧ್ಯಕ್ಷರೇ, ನೀವು ಹೊಡಿ, ಬಡಿ ರಾಜಕಾರಣದ ಬ್ರ್ಯಾಂಡ್ ಅಂಬಾಸಿಡರ್ ಆಗಲು ಹೊರಟಿದ್ದೀರಾ?” ಎಂದು ಕೇಳಿದೆ.

Join Whatsapp