Home ಟಾಪ್ ಸುದ್ದಿಗಳು ಕೊಡಗರು ಇನ್ನು ಮುಂದೆ ಕೊಡವರು: ಡಿಕೆ ಶಿವಕುಮಾರ್

ಕೊಡಗರು ಇನ್ನು ಮುಂದೆ ಕೊಡವರು: ಡಿಕೆ ಶಿವಕುಮಾರ್

ಬೆಂಗಳೂರು: ಸಚಿವ ಸಂಪುಟ ಸಭೆಯಲ್ಲಿ ಎರಡು ಪ್ರಮುಖ ವಿಚಾರ ಚರ್ಚೆ ಆಗಿದೆ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಸಚಿವ ಸಂಪುಟ ಸಭೆಯ ಬಳಿಕ ಮಾಧ್ಯಮಗಳಿಗೆ ಮಾಹಿತಿ ನೀಡಿದ ಅವರು, ಕುಂಚಿಟಿಗರ ಸಮಾಜವನ್ನು ಕೇಂದ್ರದ ಹಿಂದುಳಿದ ವರ್ಗಗಳ ಜಾತಿ ಪಟ್ಟಿಗೆ ಸೇರ್ಪಡೆಗೊಳಿಸಲು ಕೇಂದ್ರಕ್ಕೆ ಶಿಫಾರಸು ಮಾಡಲು ಸಂಪುಟ ಸಭೆ ತೀರ್ಮಾನ ಕೈಗೊಂಡಿದೆ. ಒಬಿಸಿ ಪಟ್ಟಿಗೆ ಸೇರಿಸುವುದಕ್ಕೆ ಕೇಂದ್ರಸರ್ಕಾರಕ್ಕೆ ಶಿಫಾರಸು ಮಾಡ್ತಿದ್ದೇವೆ. ಕೊಡವ ಸಮಾಜದ ಹೆಸರು ಕೊಡಗರು ಅಂತಾ ಇತ್ತು. ಇದೀಗ ಅದನ್ನು ಕೊಡವ ಅಂತಾ ಮಾಡಲು ತೀರ್ಮಾನ ಮಾಡಿದ್ದೇವೆ ಎಂದು ತಿಳಿಸಿದರು.

Join Whatsapp
Exit mobile version