ನಿದ್ದೆಗಣ್ಣಿನಲ್ಲಿರುವ ಸರ್ಕಾರ ಬಡಿದೆಬ್ಬಿಸುವೆ: ಡಿ.ಕೆ. ಶಿವಕುಮಾರ್

Prasthutha|

ಜೇವರ್ಗಿ: ನಿದ್ದೆಗಣ್ಣಲ್ಲಿರುವ ಸರ್ಕಾರವನ್ನು ಬಡಿದೆಬ್ಬಿಸುವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹೇಳಿದ್ದಾರೆ.

- Advertisement -

ಸಿಂದಗಿ ಉಪಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ನಾಮಪತ್ರ ಸಲ್ಲಿಕೆ, ಚುನಾವಣೆ ಪ್ರಚಾರಕ್ಕೆ ತೆರಳುವ ಸಂದರ್ಭದಲ್ಲಿ ಮಾತನಾಡಿದ ಅವರು,  ಅತಿವೃಷ್ಟಿಯಿಂದ ಬೆಳೆ ಹಾಳಾದ ರೈತರಿಗೆ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ನಿದ್ದೆಗಣ್ಣಲ್ಲಿರುವ ಸರ್ಕಾರವನ್ನು ಬಡಿದೆಬ್ಬಿಸುವೆ ಎಂದು ಅವರು ಹೇಳಿದ್ದಾರೆ.

ರಾಜ್ಯದ ಅನೇಕ ಕಡೆಗಳಲ್ಲಿ ಅತಿವೃಷ್ಟಿಯಿಂದಾಗಿ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿಯಾಗಿದೆ. ಆದರೂ ಸರ್ಕಾರ ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಿಲ್ಲ. ಇದು ಸರ್ಕಾರದ ಆಡಳಿತ ವೈಫಲ್ಯಕ್ಕೆ ಹಿಡಿದ ಕನ್ನಡಿಯಾಗಿದೆ ಶಿವಕುಮಾರ್ ಹೇಳಿದರು.

- Advertisement -

ಈ ವೇಳೆ ರೈತ ಮಹಿಳೆಯರು, ಕಳೆದ ವರ್ಷವೂ ಅತಿವೃಷ್ಟಿ, ಭೀಮಾ ನದಿ ಪ್ರವಾಹದಿಂದ ತೀವ್ರ ತೊಂದರೆ ಅನುಭವಿಸಿದ್ದೇವೆ. ಸಾವಿರಾರು ಹೆಕ್ಟೇರ್‌ ಜಮೀನಿನಲ್ಲಿ ಬೆಳೆದಿದ್ದ ಬೆಳೆ ನಾಶವಾಗಿದೆ. ಫಲವತ್ತಾದ ಮಣ್ಣು ಕೊಚ್ಚಿಕೊಂಡು ಹೋಗಿದೆ ಎಂದು ಅಳಲು ತೋಡಿಕೊಂಡರು.

ಪ್ರಸಕ್ತ ಸಾಲಿನಲ್ಲಿಯೂ ಕೂಡಾ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದ ಈ ಭಾಗದ ಪ್ರಮುಖ ವಾಣಿಜ್ಯ ಬೆಳೆಗಳಾದ ಹತ್ತಿ, ತೊಗರಿ, ಸೂರ್ಯಕಾಂತಿ ಹಾಗೂ ಇನ್ನಿತರ ಪ್ರಮುಖ ಬೆಳೆಗಳು ಹಾಳಾಗಿವೆ. ಹೀಗಿದ್ದರೂ ಸರ್ಕಾರ ನಮ್ಮ ನೆರವಿಗೆ ಬರುತ್ತಿಲ್ಲ. ವರ್ಷದ ಗಂಜಿ ಕಳೆದುಕೊಂಡ ಸಂಕಟ ಒಂದೆಡೆಯಾದರೇ, ಇನ್ನೊಂದೆಡೆ ಕೂಲಿ ದೊರಕದೇ ಪರದಾಡುತ್ತಿದ್ದೇವೆ. ಈ ಭಾಗದ ರೈತರ ಸ್ಥಿತಿ ಅಧೋಗತಿಗೆ ತಲುಪಿದೆ. ದಿಕ್ಕು ತೋಚದೇ ನಿಮ್ಮ ಬಳಿ ಬಂದು ಸಂಕಷ್ಟ ತೋಡಿಕೊಳ್ಳುತ್ತಿದ್ದೇವೆ. ನಮಗೆ ಸೂಕ್ತ ಪರಿಹಾರ ಕಲ್ಪಿಸಿಕೊಡಿ ಎಂದು ಕಣ್ಣೀರು ಹಾಕಿದರು.

ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಶಾಸಕ ರಾಜಶೇಖರ ಪಾಟೀಲ ಹುಮ್ನಾಬಾದ್‌, ಮಹ್ಮದ್‌ ನಲಪಾಡ್‌, ವಿಧಾನಪರಿಷತ್‌ ಮಾಜಿ ಸದಸ್ಯ ಅಲ್ಲಮಪ್ರಭು ಪಾಟೀಲ ನೆಲೋಗಿ, ಜಿಪಂ ಮಾಜಿ ಉಪಾಧ್ಯಕ್ಷ ಗುರುಲಿಂಗಪ್ಪಗೌಡ ಮಾಲಿಪಾಟೀಲ, ಬೈಲಪ್ಪ ನೆಲೋಗಿ, ರಾಜಶೇಖರ ಸೀರಿ, ವಿಜಯಕುಮಾರ ಪಾಟೀಲ ಕಲ್ಲಹಂಗರಗಾ, ಶಿವಕುಮಾರ ಕಲ್ಲಾ, ರಿಯಾಜ್‌ ಪಟೇಲ ಮುದಬಾಳ, ಸುನೀಲ ಹಳ್ಳಿ, ರುಕುಂ ಪಟೇಲ ಇಜೇರಿ, ಸಿದ್ಧಲಿಂಗರೆಡ್ಡಿ ಇಟಗಿ, ಶೌಕತ್‌ ಅಲಿಆಲೂರ, ಚಂದ್ರಶೇಖರ ಹರನಾಳ, ಅಬ್ದುಲ್‌ ರಹೇಮಾನ ಪಟೇಲ, ಮರೆಪ್ಪ ಸರಡಗಿ, ರವಿ ಕೋಳಕೂರ, ಬಸೀರ್‌ ಇನಾಮದಾರ, ಮಹಿಬೂಬ ಚನ್ನೂರ, ಮಲ್ಲಿಕಾರ್ಜುನ ಬೂದಿಹಾಳ, ಮಹೇಶ ಕೆಂಭಾವಿ, ಸುರೇಶ ಬಿರಾದಾರ, ಮರೆಪ್ಪ ಕೋಬಾಳಕರ್‌ ಹಾಗೂ ಕಾಂಗ್ರೆಸ್‌ ಕಾರ್ಯಕರ್ತರು ಹಾಗೂ ಮತ್ತಿತರರು ಮುಖಂಡರು ಇದ್ದರು.

Join Whatsapp