ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಕೊಡುವ ‘ವರ್ಷದ ವ್ಯಕ್ತಿ’ ಪ್ರಶಸ್ತಿಗೆ ಆಯ್ಕೆಯಾದ ಡಿಕೆ ಶಿವಕುಮಾರ್

Prasthutha|

ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರಿಗೆ ವಿಶೇಷ ಪ್ರಶಸ್ತಿ

- Advertisement -

ಬೆಂಗಳೂರು: 2023ನೇ ಸಾಲಿನ ‘ಪ್ರೆಸ್ ಕ್ಲಬ್ ಆಫ್ ಬೆಂಗಳೂರು’ ಪ್ರಶಸ್ತಿ ಪ್ರಕಟವಾಗಿದ್ದು, ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ‘ವರ್ಷದ ವ್ಯಕ್ತಿ’ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಅಲ್ಲದೆ, 29 ಮಂದಿ ಮಾದ್ಯಮದಲ್ಲಿ ಅಪ್ರತಿಮ ಸೇವೆ ಸಲ್ಲಿಸಿದವರಿಗೆ ಪ್ರೆಸ್ ಕ್ಲಬ್ ಜೀವಮಾನ ಸಾಧನೆ ಪ್ರಶಸ್ತಿಯನ್ನು ನೀಡಲಾಗಿದೆ.

ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಬೆಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಆರ್.ಶ್ರೀಧರ್, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಸಾರಥ್ಯವಹಿಸಿ ಪಕ್ಷ ಅಧಿಕಾರ ಸೂತ್ರ ಹಿಡಿಯಲು ಕಾರಣರಾದ ಪಕ್ಷದ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ವರ್ಷದ ವ್ಯಕ್ತಿ ಪ್ರಶಸ್ತಿಗೆ ಪ್ರೆಸ್‌ ಕ್ಲಬ್‌ ಸದಸ್ಯರು ಆಯ್ಕೆ ಮಾಡಿದ್ದಾರೆ. ರಾಜಕೀಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಸಲ್ಲಿಸಿರುವ ಸೇವೆಗೆ ಹಿರಿಯ ರಾಜಕಾರಣಿ ಶಾಸಕ ಹಾಗೂ ಮಾಜಿ ಸಚಿವ ಶಾಮನೂರು ಶಿವಶಂಕರಪ್ಪ ಅವರಿಗೆ ಪ್ರೆಸ್‌ಕ್ಲಬ್‌ ವಿಶೇಷ ಪ್ರಶಸ್ತಿ ನೀಡಲಾಗುತ್ತಿದೆ ಎಂದಿದ್ದಾರೆ.

- Advertisement -

ಪತ್ರಿಕಾ ವಿತರಕರಿಗೆ ಅಪಘಾತವಿಮೆ ಯೋಜನೆ ಪ್ರಕಟಿಸಿದ ಕಾರ್ಮಿಕ ಸಚಿವ ಸಂತೊಷ್ ಲಾಡ್ ಹಾಗೂ ಏಷ್ಯಾ ಬ್ಯಾಸ್ಕೆಟ್ ಬಾಲ್ ಫೆಡರೇಷನ್‌ ಅಧ್ಯಕ್ಷರಾಗಿ ಆಯ್ಕೆಗೊಂಡ ಮೊದಲ ಕನ್ನಡಿಗ ಡಾ. ಕೆ. ಗೋವಿಂದರಾಜು ಅವರಿಗೆ ಪ್ರೆಸ್‌ ಕ್ಲಬ್‌ ಪ್ರಶಸ್ತಿ ನೀಡಿ ಗೌರವಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಮಾಧ್ಯಮದಲ್ಲಿ ಅಪ್ರತಿಮ ಸೇವೆ ಸಲ್ಲಿಸಿರುವ 29 ಮಂದಿ ಪ್ರೆಸ್‌ ಕ್ಲಬ್ ಜೀವಮಾನ ಸಾಧನೆ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಸದಾಶಿವ ಶೆಣೈ. ಕೆ
ಸಿದ್ದೇಶ್‌ ಕುಮಾರ್ ಹೆಚ್.ಪಿ
ಆರ್. ಶಂಕ‌ರ್
ಅಫ್ಘಾನ್ ಯಾಸ್ಮಿನ್
ಡಾ. ಕೂಡ್ಲಿ ಗುರುರಾಜ್‌
ಚಂದ್ರಶೇಖರ್, ಎಂ
ಕೆ.ಕೆ ಮೂರ್ತಿ (ಕಂ.ಕ ಮೂರ್ತಿ)
ಭಾಸ್ಕರ್ ಕೆ.ಎಸ್
ನಾಗರಾಜ, ಎಂ (ಪ್ರಜಾವಾಣಿ)
ಸುಭಾಷ್ ಹೂಗಾರ್
ರೂಪಾ ಆರ್ ರಾವ್
ಪ್ರಸನ್ನಕುಮಾರ್‌ ಲೂಯಿಸ್
ಸತೀಶ್ ಕುಮಾರ್ ಬಿ.ಎಸ್
ಶಂಕರೇಗೌಡ ಹೆಚ್.ಡಿ
ರಾಕೇಶ್ ಪ್ರಕಾಶ್ (ಟೈಮ್ಸ್ ಆಫ್ ಇಂಡಿಯಾ)
ಜನಾರ್ಧನಾಚಾರಿ ಕೆ.ಎಸ್‌
ರಮೇಶ್ ಬಿ.ಎನ್ (ಅಭಿಮನ್ಯು)
ಲಿಂಗರಾಜು ಡಿ. ನೊಣವಿನಕೆರೆ
ಕಿರಣ್ ಹೆಚ್‌.ವಿ
ಮೋಹನ್‌ ರಾವ್‌ ಸಾವಂತ್‌, ಜಿ
ಚನ್ನಕೃಷ್ಣ ಪಿ.ಕೆ
ಅನಂತರಾಮು ಸಂಕ್ಲಾಪು‌, ಎಲ್
ವಿಜಯ್‌ ಕುಮಾರ್ ಮಲಗಿಹಾಳ
ಕೌಶಿಕ್. ಆರ್ (ಸ್ಪೋರ್ಟ್ಸ್)
ಮನೋಜ್‌ ಕುಮಾರ್
ಲಕ್ಷ್ಮಿಸಾಗರ ಸ್ವಾಮಿಗೌಡ
ಮುತ್ತು. ಪಿ
ಚಿದಾನಂದ ಪಟೇಲ್
ಶ್ರೀಕಂಠ ಶರ್ಮ


ಡಿಸೆಂಬರ್ 31 ರಂದು ಬೆಳಗ್ಗೆ 11:30ಕ್ಕೆ ಪ್ರೆಸ್‌ಕ್ಲಬ್‌ ಆವರಣದಲ್ಲಿ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಲಿದ್ದು, ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಶಿವರಾಜ್‌ ಪಾಟೀಲ್ ವರ್ಷದ ವ್ಯಕ್ತಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ವಸತಿ ಸಚಿವ ಜಮೀರ್ ಅಹಮದ್‌ ಮುಖ್ಯ ಅತಿಥಿಯಾಗಿ ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.

Join Whatsapp