ಬಿಜೆಪಿಯು ಜನರನ್ನು ಭಾವನಾತ್ಮಕ ವಿಷಯಗಳಿಂದ ವಂಚಿಸುತ್ತಿದೆ: ಡಿ.ಕೆ. ಸುರೇಶ್‌

Prasthutha|

ಬೆಂಗಳೂರು: ‘ಕೋವಿಡ್‌ ಸೋಂಕಿಗೆ ಸಾವಿರಾರು ಜನ ಬಲಿಯಾಗಿದ್ದಾರೆ. ಕೇಂದ್ರ ಮತ್ತು ರಾಜ್ಯಸರ್ಕಾರ ಅವರ ನೆರವಿಗೆ ಧಾವಿಸಲಿಲ್ಲ. ಇದೀಗ ಬಿಜೆಪಿಯು ಜನರನ್ನು ಭಾವನಾತ್ಮಕ ವಿಷಯಗಳನ್ನು ಮುಂದಿಟ್ಟುಕೊಂಡು ವಂಚಿಸುತ್ತಿದೆ’ ಎಂದು ಸಂಸದ ಡಿ.ಕೆ. ಸುರೇಶ್‌ ಆರೋಪಿಸಿದ್ದಾರೆ.

- Advertisement -

ಕಾಂಗ್ರೆಸ್ ಪಕ್ಷದ ವತಿಯಿಂದ ರಾಜರಾಜೇಶ್ವರಿನಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಕೆಂಪೇಗೌಡ ನಗರದಲ್ಲಿ ಮೂರುಸಾವಿರ ಕುಟುಂಬಗಳಿಗೆ ನೀಡಿದ ದಿನಸಿ ಕಿಟ್‍ಗಳನ್ನು ವಿತರಿಸಿ ಮಾತನಾಡಿದ ಅವರು, ‘ಯುಪಿಎ ಸರ್ಕಾರದ ಅವಧಿಯಲ್ಲಿ ಡಾ. ಮನಮೋಹನ್‌ ಸಿಂಗ್ ಅವರು ರಾಷ್ಟ್ರೀಯ ವಿಪತ್ತು ಯೋಜನೆಯಲ್ಲಿ ತಲಾ ₹4ಲಕ್ಷ ನೀಡಲು ಹಣವಿಟ್ಟಿದ್ದರು. ನರೇಂದ್ರ ಮೋದಿ ಅವರು ಆ ಹಣವನ್ನು ಕೊಡದೆ ಸತಾಯಿಸುತ್ತಿದ್ದಾರೆ. ನ್ಯಾಯಾಲಯ ಮಧ್ಯ ಪ್ರವೇಶಿಸಿ, ಮೃತರ ಕುಟುಂಬಕ್ಕೆ ತಲಾ ₹1ಲಕ್ಷ ಕೊಡುವಂತೆ ಆದೇಶ ನೀಡಿದೆ. ಆದರೆ, ಈವರೆಗೂ ಆ ಹಣವೂ ಬಿಡುಗಡೆಯಾಗಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಕಾಂಗ್ರೆಸ್ ನಾಯಕರಾದ ಹನುಮಂತರಾಯಪ್ಪ, ಕುಸುಮಾ, ಕೆಪಿಸಿಸಿ ಕಾರ್ಮಿಕ ಘಟಕದ ಅಧ್ಯಕ್ಷ ಪುಟ್ಟಸ್ವಾಮಿಗೌಡ, ಕೆ.ಆರ್.ಪಾರ್ಥಗೌಡ, ಹನುಮೇಗೌಡ, ಎ. ಅಮರನಾಥ್, ಕೃಷ್ಣ, ಭಾಗ್ಯಮ್ಮ ಉಪಸ್ಥಿತರಿದ್ದರು.

Join Whatsapp