Home ಟಾಪ್ ಸುದ್ದಿಗಳು ಬೆಂಗಳೂರು: ಡಿಎಂಕೆ ಮುಖಂಡನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ; ಸ್ಥಿತಿ ಗಂಭೀರ

ಬೆಂಗಳೂರು: ಡಿಎಂಕೆ ಮುಖಂಡನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ; ಸ್ಥಿತಿ ಗಂಭೀರ

ಬೆಂಗಳೂರು: ತಮಿಳುನಾಡಿನಿಂದ ಕಾರಿನಲ್ಲಿ ಬಂದ ಐವರ ಗುಂಪೊಂದು ಡಿಎಂಕೆ ಮುಖಂಡರೊಬ್ಬರ ಮೇಲೆ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ನಗರದ ಬಾಣಸವಾಡಿಯ ಕಮ್ಮನಹಳ್ಳಿ ನಡೆದಿದೆ.

 ಗಂಭೀರವಾಗಿ ಹಲ್ಲೆಗೊಳಗಾದ ವ್ಯಕ್ತಿ ಮದುರೈ ಕಾರ್ಪೊರೇಷನ್‌ನ ಮಾಜಿ ಡಿಎಂಕೆ (DMK) ಮಂಡಲ ಅಧ್ಯಕ್ಷ ವಿ.ಕೆ.ಗುರುಸ್ವಾಮಿ ಎಂದು ತಿಳಿದುಬಂದಿದೆ.

ವಿ.ಕೆ.ಗುರುಸ್ವಾಮಿ ಅವರು ಕಮ್ಮನಹಳ್ಳಿಯ ಸುಖಸಾಗರ್ ಹೋಟೆಲ್‌ನಲ್ಲಿ ಟೀ ಕುಡಿಯುತ್ತಿದ್ದರು. ಈ ವೇಳೆ ತಮಿಳುನಾಡಿನಿಂದ ಕಾರಿನಲ್ಲಿ ಬಂದ ಐವರು ಹೊಟೇಲ್​ಗೆ ನುಗ್ಗಿ ಗುರುಸ್ವಾಮಿ ಮೇಲೆ ಮಚ್ಚು, ಲಾಂಗ್‌ಗಳಿಂದ ಮನಬಂದಂತೆ ಹಲ್ಲೆಗೈದು ಪರಾರಿಯಾಗಿದ್ದಾರೆ.

ಮಾರಣಾಂತಿಕ ಹಲ್ಲೆಗೊಳಗಾದ ಗುರುಸ್ವಾಮಿ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಿತಿ ಗಂಭೀರವಾಗಿದೆ. ಘಟನಾ ಸ್ಥಳಕ್ಕೆ ಬಾಣಸವಾಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೂರ್ವ ವಿಭಾಗ ಡಿಸಿಪಿ ಭೀಮಾಶಂಕರ್ ಗುಳೇದ್ ಅವರೂ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Join Whatsapp
Exit mobile version