Home ಟಾಪ್ ಸುದ್ದಿಗಳು ಕೇರಳದಿಂದ ರಾಜ್ಯಕ್ಕೆ ಅಕ್ಟೋಬರ್ ಕೊನೆಯವರೆಗೆ ಬರಬೇಡಿ: ರಾಜ್ಯ ಸರ್ಕಾರ

ಕೇರಳದಿಂದ ರಾಜ್ಯಕ್ಕೆ ಅಕ್ಟೋಬರ್ ಕೊನೆಯವರೆಗೆ ಬರಬೇಡಿ: ರಾಜ್ಯ ಸರ್ಕಾರ

ಬೆಂಗಳೂರು: ನೆರೆಯ ಕೇರಳದಿಂದ ರಾಜ್ಯಕ್ಕೆ ಆಗಮಿಸುವವರಿಗೆ ಕೋವಿಡ್-19 ಪರೀಕ್ಷೆ ಪುನರಾವರ್ತನೆ, ಆರ್ ಟಿ- ಪಿಸಿಆರ್ ನೆಗೆಟಿವ್ ವರದಿ ಕ್ರಮಗಳ ಹೊರತಾಗಿಯೂ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಹೆಚ್ಚಿನ ಸಂಖ್ಯೆಯ ಪ್ರಕರಣಗಳ ವರದಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೇರಳದಿಂದ ಉದ್ಯೋಗಿಗಳು, ವಿದ್ಯಾರ್ಥಿಗಳು ಕರ್ನಾಟಕಕ್ಕೆ ಆಗಮಿಸದಂತೆ ಹಾಗೂ ಅಕ್ಟೋಬರ್ ಅಂತ್ಯದವರೆಗೆ ತಮ್ಮ ಪ್ರಯಾಣ ಮುಂದೂಡುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.


ಗಡಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಕೊಡಗು ಮತ್ತು ಚಾಮರಾಜನಗರದಲ್ಲಿ ಬಿಗಿ ಕಣ್ಗಾವಲು ವಹಿಸಲು ಸರ್ಕಾರ ಆದೇಶಿಸಿದ್ದು. ಈ ಕುರಿತು ರಾಜ್ಯ ಆರೋಗ್ಯ ಇಲಾಖೆ,ಮಾರ್ಗಸೂಚಿ ಬಿಡುಗಡೆಗೊಳಿಸಿದೆ.

ಕೇರಳದಿಂದ ಆಗಮಿಸುವ ಮತ್ತು ಅಲ್ಲಿಗೆ ತೆರಳುವ ವಿದ್ಯಾರ್ಥಿಗಳಿಗೆ ಈ ನಿಯಮ ಅನ್ವಯಿಸಲಿದೆ. ತುರ್ತು ಕಾರಣ ಇಲ್ಲದೆ, ಇಲ್ಲಿಂದ ಅಲ್ಲಿಗೆ ತೆರಳಬಾರದು ಮತ್ತು ಕೇರಳದಿಂದ ರಾಜ್ಯಕ್ಕೆ ಆಗಮಿಸಬಾರದು ಎಂದು ರಾಜ್ಯ ಆರೋಗ್ಯ ಸಚಿವಾಲಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಆದೇಶದಲ್ಲಿ ತಿಳಿಸಿದ್ದಾರೆ. ಸಾರ್ವಜನಿಕರ ಹಿತರಕ್ಷಣೆ ನಿಟ್ಟಿನಲ್ಲಿ ಕೋವಿಡ್-19 ಮೂರನೇ ಅಲೆ ತಡೆಯುವ ನಿಟ್ಟಿನಲ್ಲಿ ಈ ಆದೇಶ ಹೊರಡಿಸಿರುವುದಾಗಿ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.


ನಕಲಿ ಆರ್ ಟಿ- ಪಿಸಿಆರ್ ವರದಿ ತಂದಿರುವ ಪ್ರಕರಣ , ನೆಗೆಟಿವ್ ವರದಿ ಇದ್ದರೂ ಕರ್ನಾಟಕದಲ್ಲಿ ಪರೀಕ್ಷೆ ನಡೆಸಿದಾಗ ಸೋಂಕು ಧೃಢಪಟ್ಟಿರುವ ಪ್ರಕರಣ ವರದಿಯಾಗುತ್ತಿರುವುದರಿಂದ ಕಠಿಣ ಕ್ರಮಗಳಾ ಹೊರತಾಗಿಯೂ , ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಹೆಚ್ಚಿನ ಸೋಂಕು ವರದಿಯಾಗುತ್ತಿದೆ.ಈ ಹಿನ್ನಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ.

Join Whatsapp
Exit mobile version