ಎಡಗಾಲಿನಲ್ಲಿ ಗಾಯಗೊಂಡಿದ್ದ ಮಹಿಳೆಯ ಬಲಗಾಲಿಗೆ ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ!

Prasthutha|

ಕಲ್ಲೀಕೋಟೆ: ಎಡಗಾಲಿನಲ್ಲಿ ಗಾಯಗೊಂಡಿದ್ದ ಮಹಿಳೆಯ ಬಲಗಾಲಿಗೆ ವೈದ್ಯರೊಬ್ಬರು ಶಸ್ತ್ರಚಿಕಿತ್ಸೆ ನಡೆಸಿ ಎಡವಟ್ಟು ಮಾಡಿಕೊಂಡಿರುವ ಘಟನೆ ಇಲ್ಲಿನ ನ್ಯಾಷನಲ್ ಆಸ್ಪತ್ರೆಯಲ್ಲಿ ನಡೆದಿದೆ.

- Advertisement -


ರೋಗಿ ಸಜಿನಾ ಸುಕುಮಾರನ್ ಕುಟುಂಬಿಕರು ಈ ಕುರಿತು ದೂರು ನೀಡಿದ್ದು, ನಿರ್ಲಕ್ಷ್ಯ ತೋರಿದ ಆರೋಪದ ಮೇಲೆ ವೈದ್ಯ ಡಾ. ಪಿ. ಬೆಹಿರ್ ಶಾನ್ ವಿರುದ್ಧ ಪ್ರಕರಣ ದಾಖಲಾಗಿದೆ. ಘಟನೆ ಕುರಿತು ಎಡಿಎಂಒ ಇಂದು(ಫೆ.24) ಆರೋಗ್ಯ ಇಲಾಖೆಗೆ ವರದಿ ಸಲ್ಲಿಸಿದ್ದಾರೆ.


ಇನ್ನು ಶಸ್ತ್ರಚಿಕಿತ್ಸೆ ನಡೆಸಿದ ವೈದ್ಯ ತಪ್ಪೊಪ್ಪಿಕೊಳ್ಳುತ್ತಿರುವ ವೀಡಿಯೋವನ್ನು ರೋಗಿಯ ಕುಟುಂಬಿಕರು ಬಿಡುಗಡೆ ಮಾಡಿದ್ದಾರೆ. ಆಸ್ಪತ್ರೆಯ ಅಧಿಕಾರಿಗಳೊಂದಿಗೆ ನಡೆಸಿದ ಚರ್ಚೆಯಲ್ಲಿ ಎಡಗಾಲಿಗೆ ಶಸ್ತ್ರ ಚಿಕಿತ್ಸೆ ನಡೆಸಲು ಸಿದ್ಧತೆ ನಡೆಸಿದ್ದಾಗಿ ವೈದ್ಯ ಹೇಳುತ್ತಿರುವುದು ವೀಡಿಯೋದಲ್ಲಿದೆ. ರೋಗಿಯ ಕುಟುಂಬಿಕರು ವೀಡಿಯೋವನ್ನು ಪೊಲೀಸರಿಗೆ ನೀಡಿದ್ದಾರೆ.

Join Whatsapp