Home ಟಾಪ್ ಸುದ್ದಿಗಳು ಸಿಎಂ ಯೋಗಿ ಆದಿತ್ಯನಾಥ್‌ ಗೆ ಮನವಿ ಸಲ್ಲಿಸಲು ಬಂದ ವೈದ್ಯರನ್ನು ವಶಕ್ಕೆ ಪಡೆದ ಪೊಲೀಸರು

ಸಿಎಂ ಯೋಗಿ ಆದಿತ್ಯನಾಥ್‌ ಗೆ ಮನವಿ ಸಲ್ಲಿಸಲು ಬಂದ ವೈದ್ಯರನ್ನು ವಶಕ್ಕೆ ಪಡೆದ ಪೊಲೀಸರು

ಲಖನೌ : ಉತ್ತರ ಪ್ರದೇಶದ ಜಾನ್ಸಿಯಲ್ಲಿ ತಮ್ಮ ಬೇಡಿಕೆಗಳನ್ನು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಗೆ ಸಲ್ಲಿಸಲು ಮುಂದಾದ ಕಿರಿಯ ವೈದ್ಯರನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ನಡೆದಿದೆ. ಈ ಕುರಿತ ವೀಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ವ್ಯಾಪಕ ಟೀಕೆ ವ್ಯಕ್ತವಾಗಿದೆ.

ಮಹಾರಾಣಿ ಲಕ್ಷ್ಮಿ ಬಾಯಿ ಮೆಡಿಕಲ್‌ ಕಾಲೇಜಿನ ಕಿರಿಯ ವೈದ್ಯರು ಸಿಎಂ ಯೋಗಿ ಆದಿತ್ಯನಾಥ್‌ ಅವರಿಗೆ ಮನವಿ ಸಲ್ಲಿಸಲು ಮುಂದಾಗಿದ್ದರು. ಕೋವಿಡ್‌ ಸೌಲಭ್ಯಗಳ ಪರಿಶೀಲನೆಗಾಗಿ ಸಿಎಂ ಕಾಲೇಜಿಗೆ ಭೇಟಿ ನೀಡಿದ್ದರು.

ಆಸ್ಪತ್ರೆಯಲ್ಲಿ ಕೆಲವು ಸೌಲಭ್ಯಗಳು ಮತ್ತು ಆಡಳಿತಕ್ಕೆ ಸಂಬಂಧಿಸಿದ ಬೇಡಿಕೆಗಳನ್ನೊಳಗೊಂಡ ಮನವಿಯನ್ನು ಸಲ್ಲಿಸಲು ಮುಖ್ಯಮಂತ್ರಿಗೆ ಸಲ್ಲಿಸಲು ವೈದ್ಯರು ಮುಂದಾಗಿದ್ದರು. ವೈದ್ಯರನ್ನು ಬಳಿಕ ಬಿಡುಗಡೆಗೊಳಿಸಲಾಗಿದೆ.

ಕೋವಿಡ್‌ ವಾರಿಯರ್ಸ್‌ ಎನ್ನಲಾಗುತ್ತಿರುವ ವೈದ್ಯರ ಜೊತೆ ಪೊಲೀಸರು ಅನುಚಿತವಾಗಿ ವರ್ತಿಸಿರುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪ ವ್ಯಕ್ತವಾಗಿದೆ.

https://twitter.com/comrade_shreyas/status/1396481729385299972?s=08
Join Whatsapp
Exit mobile version