ಮಂಗಳೂರು | ಶ್ವಾನ ಪ್ರೇಮಿ ರಜನಿ ಶೆಟ್ಟಿ ಮೇಲೆ ಹಲ್ಲೆ: ಆಸ್ಪತ್ರೆಗೆ ದಾಖಲು

Prasthutha|

ಮಂಗಳೂರು: ಶ್ವಾನ ಪ್ರೇಮಿ, ಬೀದಿ ನಾಯಿಗಳ ಆಶ್ರಯದಾತೆಯಾಗಿರುವ ಮಂಗಳೂರಿನ ರಜನಿ ಶೆಟ್ಟಿ ಮೇಲೆ ನೆರೆಮನೆಯವರಿಂದಲೇ ಹಲ್ಲೆ ನಡೆದಿದೆ.

- Advertisement -


ಗಾಯಗೊಂಡಿರುವ ರಜನಿ ಶೆಟ್ಟಿ ಅವರನ್ನು ನಗರದ ವೆನ್ಲಾಕ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರತಿ ನಿತ್ಯ ಅಸಂಖ್ಯಾತ ಬೀದಿ ನಾಯಿಗಳಿಗೆ ಆಹಾರ ನೀಡುವ ರಜನಿ ಶೆಟ್ಟಿ ಹಾಗೂ ನೆರೆಮನೆಯ ಮಂಜುಳಾ ನಡುವೆ ನಾಯಿಗಳ ವಿಚಾರವಾಗಿಯೇ ಪದೇ ಪದೇ ಜಗಳವಾಗುತ್ತಿತ್ತು. ಸೋಮವಾರ ಮಂಜುಳಾ ರಜನಿ ಅವರ ಮೇಲೆ ಕಲ್ಲಿನಿಂದ ಹೊಡೆದು ಹಲ್ಲೆ ನಡೆಸಿದ್ದಾರೆ. ಘಟನೆ ಬಗ್ಗೆ ರಜನಿ ಶೆಟ್ಟಿ ಮಂಜುಳಾ ವಿರುದ್ಧ ಬರ್ಕೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Join Whatsapp