Home ಕರಾವಳಿ ಮಂಗಳೂರು: ನಾಯಿಯನ್ನು ಬೈಕ್ ಗೆ ಕಟ್ಟಿ ಎಳೆದೊಯ್ದ ಇಬ್ಬರಲ್ಲಿ ಒಬ್ಬ ಸೆರೆ

ಮಂಗಳೂರು: ನಾಯಿಯನ್ನು ಬೈಕ್ ಗೆ ಕಟ್ಟಿ ಎಳೆದೊಯ್ದ ಇಬ್ಬರಲ್ಲಿ ಒಬ್ಬ ಸೆರೆ


ಮಂಗಳೂರು: ಬೈಕ್‌ಗೆ ನಾಯಿಯನ್ನು ಕಟ್ಟಿ ಅಮಾನವೀಯತೆಯಿಂದ ಎಳೆದೊಯ್ದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳಲ್ಲಿ ಒಬ್ಬನನ್ನು ಬಂಧಿಸಲಾಗಿದೆ. ಕೊಪ್ಪಳ ಜಿಲ್ಲೆಯ ನೀಲಪ್ಪ ಎಂಬಾತ ಬಂಧಿತನಾಗಿದ್ದು, ಇನ್ನೊಬ್ಬನ ಮಾಹಿತಿ ಕಲೆ ಹಾಕಿರುವ ಪೊಲೀಸರು ಶೀಘ್ರ ಬಂಧಿಸುವ ಸಾಧ್ಯತೆ ಇದೆ.

ಮಂಗಳೂರು ನಗರ ಹೊರವಲಯದ ಸುರತ್ಕಲ್ ಸಮೀಪದ ಎನ್‌ಐಟಿಕೆ ರಾ.ಹೆ.ಯಲ್ಲಿ ಈ ಘಟನೆ ನಡೆದಿತ್ತು. ಮೂಕ ಪ್ರಾಣಿ ಮೇಲೆ ವಿಕೃತಿ ಮೆರೆದ ಈ ದೃಶ್ಯವನ್ನು ಹಿಂದೆ ಬರುತ್ತಿದ್ದ ಬೈಕ್ ಸವಾರರು ಚಿತ್ರೀಕರಿಸಿ ಅನಿಮಲ್ ಕೇರ್ ಟ್ರಸ್ಟ್ ಜೊತೆ ಹಂಚಿಕೊಂಡಿದ್ದರು. ಅದರಂತೆ ಈ ಬಗ್ಗೆ ಸುರತ್ಕಲ್ ಠಾಣೆಗೆ ದೂರು ನೀಡಲಾಗಿತ್ತು.

ಎ.15ರಂದು ರಾತ್ರಿ ಸುಮಾರು 8:30ಕ್ಕೆ ಬೈಕ್‌ನ ಹಿಂದೆ ಹಗ್ಗದಲ್ಲಿ ನಾಯಿಯನ್ನು ಕಟ್ಟಿ ಇಬ್ಬರು ವೇಗವಾಗಿ ಸಾಗುತ್ತಿದ್ದರು. ಅದರ ಹಿಂದೆಯೇ ಇನ್ನೊಂದು ಶ್ವಾನ ಕೂಡ ಸ್ವಲ್ಪ ದೂರ ಓಡೋಡಿ ಬಂದಿದೆ. ಚಿತ್ರೀಕರಿಸಿದವರು ಹೈವೇಯಲ್ಲಿದ್ದರೆ ದುಷ್ಕರ್ಮಿಗಳು ಸರ್ವೀಸ್ ರಸ್ತೆಯಲ್ಲಿದ್ದರು

Join Whatsapp
Exit mobile version