ಸುಳ್ಳುಗಳಿಗೆ ಮರುಳಾಗಿ ಬಿಜೆಪಿಗೆ ಮತ ಹಾಕಬೇಡಿ: ರೇವಣ್ಣ

Prasthutha|

ಶಿಗ್ಗಾವಿ: ಬಿಜೆಪಿ ಸುಳ್ಳು ಭರವಸೆ ನೀಡುತ್ತಿದೆ. ಬಿಜೆಪಿಗರು ಯಾರದೋ ಯೋಜನೆಗೆ ತಮ್ಮ ಪಟ್ಟಿ ಹಚ್ಚಿ ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಬಿಜೆಪಿಯಿಂದ ಮೋಸಕ್ಕೆ ಒಳಗಾಗದ ಮತದಾರರು ಈ ಬಾರಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸುತ್ತಿದ್ದಾರೆ ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಎಚ್.ಎಂ.ರೇವಣ್ಣ ಹೇಳಿದ್ದಾರೆ.

- Advertisement -

ಶಿಗ್ಗಾವಿ ತಾಲ್ಲೂಕಿನ ಬಂಕಾಪುರದಲ್ಲಿ ಧಾರವಾಡ ಲೋಕಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿ ಪರ ನಡೆದ ರೋಡ್ ಶೋದಲ್ಲಿ ಮಾತನಾಡಿದ ಅವರು, ಬಿಜೆಪಿ ಜನರ ನಂಬಿಕೆಗಳನ್ನು ಕಳೆದುಕೊಂಡಿದೆ. ಖಾಲಿ ಬ್ಯಾಂಕ್ ಖಾತೆಗೆ ಹಣ ನೀಡುವುದಾಗಿ ಹೇಳಿದ ಬಿಜೆಪಿ ಈ ವರೆಗೆ ಒಂದು ಪೈಸಾ ಜಮಾ ಮಾಡಲಿಲ್ಲ. ಜನರಿಗೆ ಎಲ್ಲ ಅರ್ಥವಾಗೊ ಬಿಜೆಪಿ ಕುರಿತು ಬೇಸರ ವ್ಯಕ್ತಪಡಿಸುತ್ತಿದ್ದಾರೆ ಎಂದರು.

ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹ್ಮದ್ ಮಾತನಾಡಿ, ಕಾಂಗ್ರೆಸ್ ಸರ್ಕಾರ ಚುನಾವಣೆ ಮುನ್ನ ನೀಡಿದ ಮಾತಿನಂತೆ ನಡೆದಿದೆ. ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು ಜನಮನಕ್ಕೆ ಹತ್ತಿರವಾಗಿದೆ. ಅದನ್ನು ಸಹಿಸದ ಬಿಜೆಪಿ ಗ್ಯಾರಂಟಿ ಯೋಜನೆಗಳ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಗ್ಯಾರಂಟಿ ಬಳಕೆ ಮಾಡಿಕೊಂಡ ಬಡಕೂಲಿಕಾರರಿಗೆ, ರೈತರಿಗೆ, ಯುವಕರಿಗೆ ಮತ್ತು ಮಹಿಳೆಯರಿಗೆ ಕಾಂಗ್ರೆಸ್ ಕಡೆಗಣಿಸಲಾರರು ಎಂದರು.

Join Whatsapp