ಕರ್ನಾಟಕದಲ್ಲಿ ‘ಹಿಂದಿ ದಿವಸ್ ಆಚರಣೆ’ ಬೇಡ: ಹೆಚ್ ಡಿ ಕುಮಾರಸ್ವಾಮಿ

Prasthutha|

ಕನ್ನಡಿಗರ ತೆರಿಗೆ ಹಣದಲ್ಲಿ ಹಿಂದಿ ದಿವಸ ಆಚರಣೆ ಬೇಡವೆಂದು ಸರ್ಕಾರಕ್ಕೆ ಹೆಚ್ ಡಿ ಕೆ ಪತ್ರ

- Advertisement -

ಬೆಂಗಳೂರು: ಸಪ್ಟೆಂಬರ್14 ರಂದು ಭಾರತ ಒಕ್ಕೂಟ ಸರ್ಕಾರದ ಪ್ರಾಯೋಜಿತ ಕಾರ್ಯಕ್ರಮವಾದ ಹಿಂದಿ ದಿವಸ್ ಆಚರಣೆ ಕರ್ನಾಟಕ ಸರ್ಕಾರ ಮಾಡಕೂಡದು ಎಂದು ಮಾಜಿ‌‌ ಮುಖ್ಯಮಂತ್ರಿ ಹೇಳಿದ್ದಾರೆ.

ಹಿಂದಿ ದಿವಸ ಆಚರಣೆಯ ಕುರಿತು ಮುಖ್ಯಮಂತ್ರಿ ಬೊಮ್ಮಾಯಿಗೆ ಪತ್ರ ಬರೆದಿರುವ ಹೆಚ್ ಡಿ ಕೆ, ಭಾರತವು ಸಾವಿರಾರು ಭಾಷೆ ಹಾಗೂ ಉಪ ಭಾಷೆಗಳನ್ನು ಒಳಗೊಂಡ, 560 ಕ್ಕೂ ಹೆಚ್ಚು ಸಂಸ್ಥಾನಗಳು ಒಟ್ಟು ಸೇರಿದ ಮತ್ತು ಸಾಮಾಜಿಕ, ಸಾಂಸ್ಕೃತಿಕವಾಗಿ ಭಿನ್ನ ಆಚರಣೆಗಳನ್ನು ಹೊಂದಿರುವ ಒಂದು ಮಹಾನ್ ಒಕ್ಕೂಟವಾಗಿ‍ದೆ. ಇಂತಹ ನಾಡಿನಲ್ಲಿ ಕೇವಲ ಒಂದು ಭಾಷೆಯನ್ನು ಮಾತ್ರವೇ ಮೆರೆಸುವುದು ನಿಜಕ್ಕೂ ಜನತೆಗೆ ಎಸಗುವ ಪರಮ ಅನ್ಯಾಯವಾಗಿದೆ ಎಂದು ಹೇಳಿದರು.

- Advertisement -

ಸಪ್ಟೆಂಬರ್14 ರಂದು ಕೇಂದ್ರ ಯೋಜಿತ ಹಿಂದಿ ದಿವಸವನ್ನು ಕರ್ನಾಟಕದಲ್ಲಿ ಒತ್ತಾಯಪೂರ್ವಕವಾಗಿ ಆಚರಿಸುವುದು ಕನ್ನಡಿಗರಿಗೆ ಮಾಡುವ ಅನ್ಯಾಯವಾಗಿದೆ. ನಮ್ಮ ರಾಜ್ಯದ ತೆರಿಗೆ ಹಣದಿಂದ ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರ ಹಿಂದಿ ದಿವಸ ಆಚರಣೆ ಮಾಡಬಾರದೆಂದು ಆಗ್ರಹಿಸುತ್ತೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.

Join Whatsapp