ರಾಜಕೀಯ ವಾಕ್ಸಮರದಲ್ಲಿ ನನ್ನ ಹೆಸರು ಎಳೆದು ತರಬೇಡಿ, ನಾನು ರಾಜಕೀಯದಲ್ಲಿ ಇಲ್ಲ: ಟಬು ರಾವ್

Prasthutha|

- Advertisement -

ಮಹಿಳಾ ಆಯೋಗಕ್ಕೆ ದೂರು

ಬೆಂಗಳೂರು : ಆರೋಪ ಪ್ರತ್ಯಾರೋಪಗಳ ಸಂದರ್ಭದಲ್ಲಿ ಅನಗತ್ಯವಾಗಿ ಬಿಜೆಪಿ ತಮ್ಮ ಹೆಸರನ್ನ ಎಳೆದು ತರುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಪತ್ನಿ ಟಬು ರಾವ್ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.

- Advertisement -

ನಾನು ರಾಜಕೀಯದಲ್ಲಿ ಇಲ್ಲ, ರಾಜಕೀಯ ಕುಟುಂಬದಲ್ಲಿರುವ ಒಬ್ಬ ಮಹಿಳೆ ಅಷ್ಟೇ. ರಾಜಕೀಯಕ್ಕೂ ನನಗೂ ಸಂಬಂಧವಿಲ್ಲ. ನಾನು ಮುಸ್ಲಿಂ ಕುಟುಂಬದಿಂದ ಬಂದು ಹಿಂದೂ ಕುಟುಂಬದಲ್ಲಿದ್ದೇನೆ ಎಂಬ ಒಂದೇ ಕಾರಣಕ್ಕೆ ಬಿಜೆಪಿ ತನ್ನ ರಾಜಕೀಯಕ್ಕಾಗಿ ನನ್ನ ಹೆಸರನ್ನ ತಳುಕು ಹಾಕುವುದು ಸರಿಯಲ್ಲ” ಎಂದು ಟಬು ರಾವ್ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಸಾವರ್ಕರ್ ಕುರಿತ ಸಚಿವ ದಿನೇಶ್ ಗುಂಡೂರಾವ್ ಅವರ ಹೇಳಿಕೆ ಟೀಕಿಸುವ ಭರದಲ್ಲಿ ಬಿಜೆಪಿ, ಸಚಿವರ ಪತ್ನಿ ಟಬು ರಾವ್ ಅವರ ಹೆಸರನ್ನ ಪ್ರಸ್ತಾಪಿಸಿತ್ತು. ಬಿಜೆಪಿ ಟ್ವೀಟ್ ನಲ್ಲಿ ತಮ್ಮ ಹೆಸರನ್ನ ಎಳೆದು ತಂದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಟಬು ರಾವ್ ಈ ಬಗ್ಗೆ ಸಂಬಂಧಪಟ್ಟವರನ್ನ ಕರೆಸಿ ವಿಚಾರಣೆ ನಡೆಸುವಂತೆ ಮಹಿಳಾ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.

ರಾಜಕೀಯವಾಗಿ ಟೀಕೆ ಟಿಪ್ಪಣಿ ಮಾಡುವಾಗ ನನ್ನ ಹಾಗೂ ನನ್ನ ಕುಟುಂಬದ ಬಗ್ಗೆ ಅವಹೇಳನಾಕಾರಿಯಾಗಿ ಮಾತನಾಡುತ್ತಿದ್ದಾರೆ. ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಇದೇ ರೀತಿಯ ಆಕ್ಷೇಪಾರ್ಹ ಹೇಳಿಕೆ ನೀಡಿದಾಗ ಟಬು ರಾವ್ ಅವರು ಮಾನನಷ್ಟ ಪ್ರಕರಣ ದಾಖಲಿಸಿದ್ದರು.

ಬಿಜೆಪಿ ಟ್ವೀಟ್ ಏನು?

ಸನ್ಮಾನ್ಯ @Dineshgrao ಅವರೆ, ಬ್ರಾಹ್ಮಣ ಸಮಾಜದ ವೀರ ಸಾವರ್ಕರ್‌ ಅವರು ಗೋಮಾಂಸ ಸೇವಿಸುತ್ತಿದ್ದರು ಎಂದು ನಿಮಗೆ ಬ್ರಾಹ್ಮಣ ಸಮಾಜದ ನಿಮ್ಮ ತಂದೆ ಗುಂಡೂರಾವ್‌ ಹೇಳಿದ್ದರೊ ಅಥವಾ ಮುಸ್ಲಿಂ ಸಮಾಜದ ನಿಮ್ಮ ಪತ್ನಿ ತಬಸ್ಸುಮ್‌ ಅವರು ಹೇಳಿದ್ದರೊ..??” ಎಂದು ಟ್ವೀಟ್ (ಎಕ್ಸ್) ಮೂಲಕ ಪ್ರಶ್ನಿಸಿತ್ತು.



Join Whatsapp