ಹೈದರಾಬಾದ್ ದಮ್ ಬಿರಿಯಾನಿ ತಿನ್ನಲು ಮರಿಬೇಡಿ ಎಂದ ತೆಲಂಗಾಣ ಸಚಿವ

Prasthutha|

ಹೈದರಾಬಾದ್: ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿ ಸಭೆಗೆ ಬರುತ್ತಿರುವ ಪಕ್ಷದ ನಾಯಕರು ಹೈದರಾಬಾದ್ ದಮ್ ಬಿರಿಯಾನಿ ಹಾಗೂ ಇರಾನಿ ಟೀಯನ್ನು ಕುಡಿಯಲು ಮರಿಬೇಡಿ ಎಂದು ತೆಲಂಗಾಣ ಸಚಿವ ಕೆ.ಟಿ. ರಾಮ ರಾವ್ ಹೇಳಿದ್ದಾರೆ.

- Advertisement -


ಪ್ರಧಾನಿ ನರೇಂದ್ರ ಮೋದಿ ಅವರ ಉಪಸ್ಥಿತಿಯಲ್ಲಿ ಹೈದರಾಬಾದ್ ನಲ್ಲಿ ಎರಡು ದಿನಗಳ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಆಯೋಜಿಸಲಾಗಿದ್ದು, ಈ ಬಗ್ಗೆ ವ್ಯಂಗ್ಯವಾಗಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರ ಪುತ್ರ ರಾಮ ರಾವ್, ಕಾರ್ಯಕಾರಿಣಿ ಸಭೆಗಾಗಿ ಸುಂದರ ನಗರ ಹೈದರಾಬಾದ್ ಗೆ ಬರುತ್ತಿರುವ ವಾಟ್ಸಾಪ್ ವಿಶ್ವವಿದ್ಯಾಲಯಕ್ಕೆ ಸ್ವಾಗತ. ಎಲ್ಲ ಜುಮ್ಲಾ ಜೀವಿಗಳಲ್ಲಿ ಒಂದು ವಿನಂತಿ. ನಮ್ಮ ದಮ್ ಬಿರಿಯಾನಿ ಮತ್ತು ಇರಾನಿ ಟೀ ರುಚಿ ನೋಡಲು ಮರೆಯದಿರಿ ಎಂದು ಹೇಳಿದ್ದಾರೆ.


ರಾಜ್ಯ ಸರ್ಕಾರವು ಜಾರಿಗೆ ತಂದ ಯೋಜನೆಗಳ ಕೆಲವು ಫೋಟೊಗಳನ್ನು ಹಂಚಿಕೊಂಡಿರುವ ರಾಮ ರಾವ್, ಈ ಸ್ಥಳಗಳಿಗೂ ಭೇಟಿ ನೀಡಿ ಎಂದು ಬಿಜೆಪಿ ನಾಯಕರಿಗೆ ಆಹ್ವಾನಿಸಿದ್ದಾರೆ. ಅಲ್ಲದೆ ತಮ್ಮ ರಾಜ್ಯಗಳಲ್ಲಿ ಅನುಷ್ಠಾನಕ್ಕೆ ತನ್ನಿ ಎಂದು ಬಿಜೆಪಿ ನಾಯಕರನ್ನು ಮೂದಲಿಸಿದ್ದಾರೆ.

Join Whatsapp