ಹೆಣ್ಣು ಸಿಗುತ್ತಿಲ್ಲ, ನಮಗೆ ಮದುವೆ ಮಾಡಿಸಿ: ಜಿಲ್ಲಾಧಿಕಾರಿಗೆ ಪತ್ರ ಬರೆದ 7 ಯುವಕರು

Prasthutha|

ತುಮಕೂರು: ರೈತ ಎಂಬ ಕಾರಣಕ್ಕೆ ಮದುವೆ ಮಾಡಿಕೊಳ್ಳಲು ಯಾರು ಮುಂದೆ ಬರುತ್ತಿಲ್ಲ. ಹಾಗಾಗಿ ನಮಗೆ ಮದುವೆ ಮಾಡಿಸಿ ಎಂದು 7 ಮಂದಿ ಯುವ ರೈತರು ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ. 

- Advertisement -

ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ತಿಮ್ಲಾಪುರ ಗ್ರಾಮದ ರೈತ ಯುವಕರು ಪತ್ರ ಬರೆದು ನಾವು ರೈತರಾಗಿರುವುದರಿಂದ ನಮಗೆ ಎಲ್ಲೂ ವಧು ಸಿಗುತ್ತಿಲ್ಲ. ಆದ್ದರಿಂದ ನಮ್ಮ  ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ಮದುವೆ ಮಾಡಿಸಬೇಕು ಎಂದು ಪತ್ರದ ಮೂಲಕ ತಿಳಿಸಿದ್ದಾರೆ. 

7 ಮಂದಿ ಯುವ ರೈತರ ಮದುವೆ ವಿಚಾರ ಇದೀಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದೆ.

Join Whatsapp