Home ಟಾಪ್ ಸುದ್ದಿಗಳು ಹುಬ್ಬಳ್ಳಿ ಉದ್ವಿಗ್ನಕ್ಕೆ ರಾಜಕೀಯ ಬಣ್ಣ ಕೊಡಬೇಡಿ: ಮುಖ್ಯಮಂತ್ರಿ ಬೊಮ್ಮಾಯಿ

ಹುಬ್ಬಳ್ಳಿ ಉದ್ವಿಗ್ನಕ್ಕೆ ರಾಜಕೀಯ ಬಣ್ಣ ಕೊಡಬೇಡಿ: ಮುಖ್ಯಮಂತ್ರಿ ಬೊಮ್ಮಾಯಿ

ಹೊಸಪೇಟೆಹುಬ್ಬಳ್ಳಿಯಲ್ಲಿ ಶನಿವಾರ ರಾತ್ರಿ ನಡೆದ ಘಟನೆಗೆ ರಾಜಕೀಯ ಬಣ್ಣ ಕೊಡುವ ಅಗತ್ಯವಿಲ್ಲ. ಇದನ್ನು ಕಾನೂನು ಸುವ್ಯವಸ್ಥೆಯ ಘಟನೆ ಎಂದು ನೋಡಬೇಕು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಾಟ್ಸ್‌ ಆ್ಯಪ್‌ ಪೋಸ್ಟ್‌ ವಿಚಾರವಾಗಿ ಪೊಲೀಸರು ಈಗಾಗಲೇ ಸಂಬಂಧಿಸಿದವರನ್ನು ಬಂಧಿಸಿದ್ದಾರೆ. ಪ್ರಚೋದನಕಾರಿಯಾಗಿ ಪೊಲೀಸ್‌ ಠಾಣೆ ಎದುರು ಬಂದು ಗಲಾಟೆ ಮಾಡಿ, ಪೊಲೀಸರಿಗೂ ಏಟು ಬೀಳುವ ರೀತಿಯಲ್ಲಿ ನಡೆದುಕೊಳ್ಳಲಾಗಿದೆ. ಹಳೆ ಹುಬ್ಬಳ್ಳಿಯ ವಿವಿಧ ಭಾಗಗಳಲ್ಲಿ ಕಲ್ಲು ತೂರಾಟ ನಡೆಸಿದ್ದು ತೀವ್ರ ಅಕ್ಷಮ್ಯ ಎಂದು ತಿಳಿಸಿದರು.

ಪೊಲೀಸರು ಈಗಾಗಲೇ ಕ್ರಮ ಕೈಗೊಂಡಿದ್ದರೂ ಕೂಡ ಕಾನೂನು ಕೈಗೆತ್ತಿಕೊಂಡರೆ ಕಠಿಣ ಕ್ರಮ ಜರುಗಿಸಲು ಹಿಂದೇಟು ಹಾಕುವುದಿಲ್ಲ. ಈ ಘಟನೆ, ಪ್ರಚೋದನೆ ಹಿಂದೆ ಇರುವವರ ಮೇಲೆ ಕ್ರಮ ತೆಗೆದುಕೊಳ್ಳಲಾಗುವುದು. ಈ ತರಹದ ಸಂಘಟನೆಗಳು ಕಾನೂನು ಕೈಗೆತ್ತಿಕೊಳ್ಳುವ ಸಾಹಸ ಮಾಡಬಾರದು. ಅದನ್ನು ಸಹಿಸುವುದಿಲ್ಲ. ಕಾನೂನು ತನ್ನ ಕ್ರಮ ಕೈಗೊಳ್ಳುತ್ತದೆ ಎಂದು ಹೇಳಿದರು.

Join Whatsapp
Exit mobile version