ಮುಂದಿನ ಸೂಚನೆ ಬರುವವರೆಗೆ ಬಾಂಗ್ಲಾದೇಶಕ್ಕೆ ಹೋಗಬೇಡಿ: ನಾಗರಿಕರಿಗೆ ಕೇಂದ್ರ ಸರ್ಕಾರ ಸೂಚನೆ

Prasthutha|

ನವದೆಹಲಿ: ಬಾಂಗ್ಲಾದೇಶದಲ್ಲಿ ಹಿಂಸಾತ್ಮಕ ಪ್ರತಿಭಟನೆಗಳ ನಡುವೆ 100ಕ್ಕೂ ಹೆಚ್ಚು ನಾಗರಿಕರು ಪ್ರಾಣಕಳೆದುಕೊಂಡಿದ್ದು, ಭಾರತವು ತನ್ನ ಪ್ರಜೆಗಳಿಗೆ ಮುಂದಿನ ಸೂಚನೆ ಬರುವವರೆಗೆ ಬಾಂಗ್ಲಾದೇಶಕ್ಕೆ ಪ್ರಯಾಣಿಸದಂತೆ ಎಚ್ಚರಿಕೆ ನೀಡಿದೆ.

- Advertisement -


ವಿದೇಶಾಂಗ ವ್ಯವಹಾರಗಳ ಸಚಿವಾಲಯವು (MEA) ಪ್ರಸ್ತುತ ಬಾಂಗ್ಲಾದೇಶದಲ್ಲಿ ವಾಸಿಸುತ್ತಿರುವ ತನ್ನ ನಾಗರಿಕರಿಗೆ ಅತ್ಯಂತ ಜಾಗರೂಕರಾಗಿರಿ, ಅಗತ್ಯವಿದ್ದರೆ ಮಾತ್ರ ಮನೆಯಿಂದ ಹೊರಬರುವಂತೆ ಸೂಚಿಸಿದೆ. ಬಾಂಗ್ಲಾದೇಶದಲ್ಲಿ ಈಗ ನಡೆಯುತ್ತಿರುವ ಬೆಳವಣಿಗೆಗಳ ದೃಷ್ಟಿಯಿಂದ, ಮುಂದಿನ ಸೂಚನೆ ಬರುವವರೆಗೂ ಬಾಂಗ್ಲಾದೇಶಕ್ಕೆ ಪ್ರಯಾಣಿಸದಂತೆ ಭಾರತೀಯ ಪ್ರಜೆಗಳಿಗೆ ಸಲಹೆ ನೀಡಲಾಗಿದೆ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.



Join Whatsapp