ಈ ದಸರಾಗೆ ಮುಡಾ ಸೈಟ್ ನೋಡುವುದನ್ನು ತಪ್ಪಿಸಿಕೊಳ್ಳಬೇಡಿ: ಸಿಎಂ ವಿರುದ್ಧ ಬಿಜೆಪಿ ವ್ಯಂಗ್ಯ

Prasthutha|

ಬೆಂಗಳೂರು: ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾನೂನು ಸಂಕಷ್ಟ ಎದುರಾಗಿದೆ.

- Advertisement -


ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರದ್ದೂ ಪಾಲು ಇದೆ ಅಂತ ಆರೋಪಿಸಿ ವಿಪಕ್ಷ ಬಿಜೆಪಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಆಗ್ರಹಿಸುತ್ತಿದೆ.


ಇದರ ನಡುವೆ ಬಿಜೆಪಿ ಸಾಮಾಜಿಕ ಮಾಧ್ಯಮ ಎಕ್ಸ್ (ಟ್ವಿಟರ್)ನಲ್ಲಿ ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ವ್ಯಂಗ್ಯವಾಗಿ ಪೋಸ್ಟ್ ಹಾಕಿದೆ.

- Advertisement -


“ಈ ದಸರಾದಲ್ಲಿ, ಐದು ಸಾವಿರ ಕೋಟಿ ಮೌಲ್ಯದ ಅದ್ಭುತವಾದ ಮುಡಾ “ಸೈಟ್” ಸೀಯಿಂಗ್ ಟೂರ್ ಅನ್ನು ತಪ್ಪಿಸಿಕೊಳ್ಳಬೇಡಿ. ಸೈಟ್ ಸೀಯಿಂಗ್ ನಲ್ಲಿ ನೀವು ಹಿಂದೆಂದು ನೋಡದ ಭ್ರಷ್ಟಾಚಾರವನ್ನು ಹತ್ತಿರದಿಂದ ನೋಡಬಹುದು. ಸೈಟ್ ಸೀಯಿಂಗ್ ಗೆ ಗೋಲ್ಡ್ ಪಾಸ್ ಬೇಕೇ? ದಯವಿಟ್ಟು ಸಂಪರ್ಕಿಸಿ ಸಿಎಂ ಸಿದ್ದರಾಮಯ್ಯ (ನಿಯಮಗಳು ಮತ್ತು ಲಂಚ ಅನ್ವಯಿಸುತ್ತವೆ) ಮತ್ತು ನೆನಪಿಡಿ, ವಾಮ ಮಾರ್ಗವಾಗಿ ಪ್ರವೇಶಿಸುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು. ತಮಾಷೆ ಅಲ್ಲ! ಕರ್ನಾಟಕದಲ್ಲಿ ನಾವು ಈಗಾಗಲೇ ಮುಖ್ಯಮಂತ್ರಿಗಳನ್ನು ವಿಚಾರಣೆಗೆ ಒಳಪಡಿಸಿದ್ದೇವೆ” ಎಂದು ಪೋಸ್ಟ್ ಹಾಕಿದೆ.



Join Whatsapp