Home ಟಾಪ್ ಸುದ್ದಿಗಳು ಅಸತ್ಯಗಳನ್ನು ಪ್ರಕಟಿಸಬೇಡಿ: ಇನ್ಟ್ರಾಗ್ರಾಮ್ ಪೋಸ್ಟ್ ಮಾಡಿದ ದರ್ಶನ್ ಪತ್ನಿ

ಅಸತ್ಯಗಳನ್ನು ಪ್ರಕಟಿಸಬೇಡಿ: ಇನ್ಟ್ರಾಗ್ರಾಮ್ ಪೋಸ್ಟ್ ಮಾಡಿದ ದರ್ಶನ್ ಪತ್ನಿ

ಬೆಂಗಳೂರು: ರೇಣುಕಾ ಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ವಿಚಾರಣೆಯ ಬಳಿಕ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿದ್ದಾರೆ. ಅಸತ್ಯಗಳನ್ನು ಪ್ರಕಟಿಸಬೇಡಿ ಎಂದು ಮಾಧ್ಯಮಗಳಲ್ಲಿ ವಿನಂತಿಸಿದ್ದಾರೆ.

ಕೊಲೆಯಾದ ರೇಣುಕಾ ಸ್ವಾಮಿ ಕುಟುಂಬದವರಿಗೆ ಸಂತಾಪ ಸೂಚಿಸಿದ್ದ ವಿಜಯಲಕ್ಷ್ಮಿ, ತಾಯಿ ಚಾಮುಂಡೇಶ್ವರಿ ಹಾಗೂ ಕಾನೂನಿನ ಮೇಲೆ ನನಗೆ ವಿಶ್ವಾಸವಿದೆ. ಸತ್ಯಾಸತ್ಯತೆ ಆದಷ್ಟು ಬೇಗ ಹೊರಬರಲಿ, ಸತ್ಯಮೇವ ಜಯತೆ ಎಂದು ಬರೆದಿದ್ದಾರೆ.

ಕಳೆದ ಕೆಲವು ದಿನಗಳಿಂದ ದರ್ಶನ್, ನಾನು, ನನ್ನ ಹದಿಹರೆಯದ ಮಗ ಮತ್ತು ದರ್ಶನ್ ಅವರ ಎಲ್ಲಾ ಸ್ನೇಹಿತರು, ಕುಟುಂಬ ಮತ್ತು ಅಭಿಮಾನಿಗಳಿಗೆ ದುಃಖ ತುಂಬಿದೆ. ಗೌರವಾನ್ವಿತ ನ್ಯಾಯಾಲಯ ಹೊರಡಿಸಿದ ಆದೇಶದಂತೆ ಕೆಲವು ಮಾಧ್ಯಮಗಳು ಮತ್ತು ವಿವಿಧ ಸಾಮಾಜಿಕ ಮಾಧ್ಯಮ ಪ್ಲಾಟ್‌ ಫಾರ್ಮ್‌‌ಗಳಲ್ಲಿ ಸುಳ್ಳು ಮಾಹಿತಿ ಮತ್ತು ಅಸತ್ಯಗಳನ್ನು ಪ್ರಕಟಿಸಬೇಡಿ. ಅಧಿಕಾರಿಗಳು ಅಧಿಕೃತವಾಗಿ ಹೇಳಿದ್ದನ್ನು ಮಾತ್ರ ಪ್ರಕಟಿಸಿ. ತಾಯಿ ಚಾಮುಂಡೇಶ್ವರಿ ಮತ್ತು ನಮ್ಮ ಕಾನೂನು ವ್ಯವಸ್ಥೆಯಲ್ಲಿ ನನಗೆ ಸಂಪೂರ್ಣ ನಂಬಿಕೆ ಇದೆ. ನ್ಯಾಯವು ಮೇಲುಗೈ ಸಾಧಿಸಲಿ ಎಂದು ವಿಜಯ ಲಕ್ಷ್ಮಿ ಬರೆದುಕೊಂಡಿದ್ದಾರೆ

Join Whatsapp
Exit mobile version