Home ಟಾಪ್ ಸುದ್ದಿಗಳು ಗ್ಯಾರಂಟಿ ಯೋಜನೆಗಳ ಅರ್ಜಿ ಸಲ್ಲಿಕೆಗೆ ಜನರಿಂದ ಹಣ ಪಡೆಯುವಂತಿಲ್ಲ: ಡಿಕೆ ಶಿವಕುಮಾರ್ ಎಚ್ಚರಿಕೆ

ಗ್ಯಾರಂಟಿ ಯೋಜನೆಗಳ ಅರ್ಜಿ ಸಲ್ಲಿಕೆಗೆ ಜನರಿಂದ ಹಣ ಪಡೆಯುವಂತಿಲ್ಲ: ಡಿಕೆ ಶಿವಕುಮಾರ್ ಎಚ್ಚರಿಕೆ

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಸದುಪಯೋಗ ಪಡೆದುಕೊಳ್ಳಲು ಫಲಾನುಭವಿಗಳು ಅರ್ಜಿ ಸಲ್ಲಿಸುತ್ತಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡು ಸೇವಾಸಿಂಧು, ಬೆಂಗಳೂರು ಒನ್ ಸೇರಿದಂತೆ ಹಲವು ಕೇಂದ್ರಗಳಲ್ಲಿ ಹಣ ವಸೂಲಿ ಮಾಡುತ್ತಿರುವ ದೂರು ಕೇಳಿಬರುತ್ತಿವೆ. ಇದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗಮನಕ್ಕೆ ಬಂದಿದ್ದು, ಗ್ಯಾರಂಟಿ ಯೋಜನೆಗಳ ಅರ್ಜಿ ಸಲ್ಲಿಕೆಗೆ ಜನರಿಂದ ಹಣ ಪಡೆಯುವಂತಿಲ್ಲ ಎಂದು ಖಡಕ್ ಸಾರ್ಮುನು ಹೊರಡಿಸಿದ್ದಾರೆ.


ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಗ್ಯಾರಂಟಿ ಯೋಜನೆಗಳ ಅರ್ಜಿ ಸಲ್ಲಿಕೆಗೆ ಜನ ಹಣ ನೀಡುವಂತಿಲ್ಲ. ಸೇವಾಸಿಂಧು ಸೇರಿ ಹಲವು ಕೇಂದ್ರಗಳಲ್ಲಿ ಹಣ ಪಡೆಯುವ ದೂರು ಬಂದಿದೆ. ಯಾರೂ ಕೂಡ ಸಾರ್ವಜನಿಕರಿಂದ ಹಣ ಪಡೆಯುವಂತಿಲ್ಲ. ಒಂದು ವೇಳೆ ಹಣ ಪಡೆದರೆ ಅಂತಹ ಏಜೆನ್ಸಿ ಲೈಸೆನ್ಸ್ ರದ್ದುಗೊಳಿಸುತ್ತೇವೆ ಎಂದು ಖಡಕ್ ಸೂಚನೆ ಕೊಟ್ಟರು. 200 ಯುನಿಟ್ ಉಚಿತ ವಿದ್ಯುತ್ ಕಲ್ಪಿಸುವ ಗೃಹ ಜ್ಯೋತಿ ಯೋಜನೆಗೆ ನಿಮ್ಮ ಸ್ಮಾರ್ಟ್ ಫೋನ್, ಕಂಪ್ಯೂಟರ್/ ಲ್ಯಾಪ್ಟಾಪ್ ಗಳಿಂದ ನೊಂದಾಯಿಸುವ ಸುಲಭ ಮಾರ್ಗ ಇದ್ದು, ಯಾವುದೇ ದಾಖಲೆ ಅಪ್ಲೋಡ್ ಮಾಡುವ ಅವಶ್ಯಕತೆ ಇಲ್ಲ. ಇನ್ನು ಈ ಸೌಲಭ್ಯಗಳಿಲ್ಲದವರು ಕರೆಂಟ್ ಬಿಲ್, ಆಧಾರ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ಗೆ ಲಿಂಕ್ ಆಗಿರುವ ಮೊಬೈಲ್ ನಂಬರ್ ನೊಂದಿಗೆ ಹತ್ತಿರದ ಗ್ರಾಮ ಒನ್, ಬೆಂಗಳುರು ಒನ್, ಸೇವಾಸಿಂಧು ಸೇರಿದಂತೆ ಸರ್ಕಾರ ತಿಳಿಸಿರುವ ಕೇಂದ್ರಗಳಿಗೆ ಹೋಗಿ ಅರ್ಜಿ ಸಲ್ಲಿಸಬಹುದಾಗಿದೆ. ರಾಜ್ಯಾದ್ಯಂತ ಬಹಳಷ್ಟು ಜನರು ಒಟ್ಟಿಗೆ ಅರ್ಜಿ ಸಲ್ಲಿಕೆ ಮಾಡುತ್ತಿರುವುದರಿಂದ ಬಹುತೇಕ ಕರೆಗಳಲ್ಲಿ ಸರ್ವರ್ ಸಮಸ್ಯೆ ಎದುರಾಗುತ್ತಿದೆ. ಅರ್ಜಿ ನೊಂದಾಯಿಸಲು ಕೊನೆಯ ದಿನಾಂಕ ಇಲ್ಲ ,ಹಾಗಾಗಿ ಅವಸರ ಮಾಡುವುದು ಬೇಡ ಎಂದರು.


ಇನ್ನು ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಗೆ ಮೂರು ತಿಂಗಳೊಳಗೆ ಸೇವಾಸಿಂಧು ಮೂಲಕ ಸ್ಮಾರ್ಟ್ ಕಾರ್ಡ್ ಪಡೆದುಕೊಳ್ಳಬೇಕು. ಇನ್ನು ಮನೆ ಒಡತಿಗೆ 2000 ನೀಡುವ ಗೃಹ ಲಕ್ಷ್ಮೀ ಯೋಜನೆಗೆ ಇನ್ನೂ ಸರ್ಕಾರ ಅರ್ಜಿ ಆಹ್ವಾನಿಸಿಲ್ಲ ಎಂದರು.

Join Whatsapp
Exit mobile version