ನಿಮ್ಮನ್ನು ಸೋಲಿಸಿದವರ ಮೇಲೆ ಸೇಡು ತೀರಿಸಿಕೊಳ್ಳಬೇಡಿ: ಮೋದಿಗೆ ಸ್ಟಾಲಿನ್ ತಿರುಗೇಟು

Prasthutha|

ದೆಹಲಿ: ರಾಜಕೀಯದಲ್ಲಿ ಇಷ್ಟವಾಗುವುದು ಮತ್ತು ಇಷ್ಟವಿಲ್ಲದಿರುವುದನ್ನು ಆಧರಿಸಿ ಪ್ರಧಾನಿ ನರೇಂದ್ರ ಮೋದಿ ಸರ್ಕಾರವನ್ನು ನಡೆಸಿದರೆ ಅವರನ್ನು ಪ್ರತ್ಯೇಕವಾಗಿ ದೂರವಿಡಲಾಗುವುದು ಎಂದು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಹೇಳಿದ್ದಾರೆ.

- Advertisement -


ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ಬಜೆಟ್ ಹಂಚಿಕೆ ಕುರಿತು ಪ್ರಧಾನಿ ಮೇಲೆ ಸ್ಟಾಲಿನ್ ವಾಗ್ದಾಳಿ ನಡೆಸಿದ್ದಾರೆ.


ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಲೋಕಸಭೆ ಚುನಾವಣೆಯಲ್ಲಿ ಸೋಲಿಸಿದವರ ಮೇಲೆ ಮೋದಿ ಸೇಡು ತೀರಿಸಿಕೊಳ್ಳುತ್ತಿದ್ದಾರೆ ಎಂದು ಎಂಕೆ ಸ್ಟಾಲಿನ್ ಆರೋಪಿಸಿದ್ದಾರೆ.

- Advertisement -


ಕೇಂದ್ರ ಹಣಕಾಸು ವರದಿಯಲ್ಲಿ ಹಲವು ರಾಜ್ಯಗಳನ್ನು ಕೈಬಿಟ್ಟಿರುವುದನ್ನು ವಿರೋಧಿಸಿ ಇಂಡಿಯಾ ಬಣದ ಸಂಸದರು ಪ್ರತಿಭಟನೆ ನಡೆಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರೇ ಚುನಾವಣೆ ಮುಗಿದಿದೆ, ಈಗ ನಾವು ದೇಶದ ಬಗ್ಗೆ ಯೋಚಿಸಬೇಕು ಎಂದು ಹೇಳಿದ್ದೀರಿ. ಆದರೆ ನಿನ್ನೆಯ ಬಜೆಟ್ 2024 ನಿಮ್ಮ ಆಡಳಿತವನ್ನು ಉಳಿಸುತ್ತದೆ ದೇಶವನ್ನಲ್ಲ.ನಿಮ್ಮನ್ನು ಸೋಲಿಸಿದವರ ಮೇಲೆ ಸೇಡು ತೀರಿಸಿಕೊಳ್ಳಬೇಡಿ. ನೀವು ರಾಜಕೀಯ ಇಷ್ಟ, ಇಷ್ಟವಿಲ್ಲದಿರುವಿಕೆ ಆಧರಿಸಿ ಸರ್ಕಾರ ನಡೆಸಬೇಡಿ, ಹಾಗೆ ಮಾಡಿದರೆ ನಿಮ್ಮನ್ನೇ ನಾವು ಪ್ರತ್ಯೇಕವಾಗಿರಿಸುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.



Join Whatsapp