Home ಟಾಪ್ ಸುದ್ದಿಗಳು ಉರಿಗೌಡ-ನಂಜೇಗೌಡರ ಚರ್ಚೆಯಲ್ಲಿ ಸಮಯ ವ್ಯರ್ಥ ಮಾಡಬೇಡಿ: ಬಿಜೆಪಿ ಮುಖಂಡರಿಗೆ ಸಚಿವ ನಿರಾಣಿ ಚಾಟಿ

ಉರಿಗೌಡ-ನಂಜೇಗೌಡರ ಚರ್ಚೆಯಲ್ಲಿ ಸಮಯ ವ್ಯರ್ಥ ಮಾಡಬೇಡಿ: ಬಿಜೆಪಿ ಮುಖಂಡರಿಗೆ ಸಚಿವ ನಿರಾಣಿ ಚಾಟಿ

ಕಾರವಾರ: ಉರಿಗೌಡ-ನಂಜೇಗೌಡರ ಚರ್ಚೆಯಲ್ಲಿ ಸಮಯ ವ್ಯರ್ಥ ಮಾಡಬೇಡಿ, ಅಭಿವೃದ್ಧಿ ಕಡೆ ಗಮನಹರಿಸಿ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.


ಈ ಬಗ್ಗೆ ಅಂಕೋಲಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಾಡಲು ಬೇಕಾದಷ್ಟು ಕೆಲಸಗಳಿವೆ. ಅದನ್ನು ಬಿಟ್ಟು ಆ ಗೌಡ್ರು ಏನಾದ್ರು, ಈ ಗೌಡ್ರು ಏನಾದ್ರು ಎಂದು ಕೇಳುವ ಸಂದರ್ಭ ಇದಲ್ಲ. ಯಾವುದೇ ಪಕ್ಷದವರಾದರೂ ಇಂಥ ಚಿಂತನೆಗಳನ್ನು ಕೈ ಬಿಡಬೇಕು ಎಂದರು.


ನಮ್ಮ ದೇಶ, ರಾಜ್ಯಕ್ಕೆ ಇನ್ನೂ ಸಾಕಷ್ಟು ಸವಾಲುಗಳಿವೆ. ಉದ್ಯೋಗ ಸೃಷ್ಟಿ, ಕೈಗಾರಿಕೆ ಸ್ಥಾಪನೆ, ನೀರಾವರಿ, ಕೃಷಿ ಅಭಿವೃದ್ಧಿಯಂತಹ ಕೆಲಸಗಳು ಆಗಬೇಕಿವೆ. ದೇಶ ಸ್ವತಂತ್ರಗೊಂಡು ನೂರು ವರ್ಷಗಳನ್ನು ಪೂರೈಸುವ ವೇಳೆಗೆ ಭಾರತ ಹೇಗಿರಬೇಕು ಎನ್ನುವುದನ್ನು ಎಲ್ಲರೂ ಚಿಂತಿಸಬೇಕು. ಅದರ ಬದಲು ಯಾವುದೇ ಲಾಭವೂ ಇಲ್ಲದ, ನಷ್ಟವೂ ಇಲ್ಲದ ಇಂತಹ ಚಿಂತನೆಗಳಿಂದ ಸಮಯ ವ್ಯರ್ಥವಾಗುವುದನ್ನು ಹೊರತುಪಡಿಸಿ ಮತ್ತೇನೂ ಆಗುವುದಿಲ್ಲ. ಇದೆಲ್ಲವನ್ನು ಬಿಟ್ಟು ರಾಜ್ಯದ ಅಭಿವೃದ್ಧಿಯತ್ತ ಗಮನಹರಿಸಬೇಕು” ಎಂದು ಸಲಹೆ ನೀಡಿದರು.

Join Whatsapp
Exit mobile version