ಕನ್ನಡ ಸಾಹಿತ್ಯ ಪರಿಷತ್ ನೂತನ ಅಧ್ಯಕ್ಷರಾಗಿ ಡಾ.ಮಹೇಶ್ ಜೋಶಿ ಆಯ್ಕೆ

Prasthutha|

ಬೆಂಗಳೂರು: ಕನ್ನಡಿಗರ ಪ್ರಾತಿನಿಧ್ಯ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರಾಗಿ ನಾಡೋಜ ಡಾ. ಮಹೇಶ್ ಜೋಶಿ ಆಯ್ಕೆಯಾಗಿದ್ದಾರೆ.

- Advertisement -


ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಮುರುಗೇಶ್ ನಿರಾಣಿ, ಕನ್ನಡಿಗರ ಪ್ರಾತಿನಿಧ್ಯ ಸಂಸ್ಥೆಯಾದ ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ನಾಡೋಜ ಡಾ. ಮಹೇಶ್ ಜೋಶಿ ಅವರಿಗೆ ಅಭಿನಂದನೆಗಳು. ನಿಮ್ಮ ಅವಧಿಯಲ್ಲಿ ಕಸಾಪಕ್ಕೆ ಹೊಸ ಚೈತನ್ಯ ಮೂಡಿ ಬರಲಿ ಎಂದು ಆಶಿಸುವೆ. ನಾಡು- ನುಡಿಗೆ ನಮ್ಮ ಸಹಕಾರ, ಸಹಾಯ ಎಂದೆಂದಿಗೂ ಇರಲಿದೆ ಎಂದು ತಿಳಿಸಿದ್ದಾರೆ.

Join Whatsapp