ಡಿಸಿಎಂ ಡಿಕೆ ಶಿವಕುಮಾರ್ ಆಪ್ತ ಕಾರ್ಯದರ್ಶಿಯಾಗಿ ರಾಜೇಂದ್ರ ಪ್ರಸಾದ್ ನೇಮಕ

Prasthutha|

ಬೆಂಗಳೂರು: ಕರ್ನಾಟಕ ಡಿಸಿಎಂ ಡಿಕೆ ಶಿವಕುಮಾರ್ ಅವರ ಆಪ್ತ ಕಾರ್ಯದರ್ಶಿಯಾಗಿ ಕಾನೂನು ಮಾಪನ ಶಾಸ್ತ್ರ ಇಲಾಖೆ ನಿಯಂತ್ರಕ ಕೆಎಎಸ್​ ಅಧಿಕಾರಿ ಡಾ.ಎಂ.ಎನ್.ರಾಜೇಂದ್ರ ಪ್ರಸಾದ್ ನೇಮಕಗೊಂಡಿದ್ದಾರೆ. ಇತ್ತೀಚೆಗಷ್ಟೇ ಕೆಎಎಸ್ ಅಧಿಕಾರಿ ಡಾ. ವೆಂಕಟೇಶಯ್ಯ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.

- Advertisement -

ಸಿಎಂ ಸಿದ್ದರಾಮಯ್ಯ ಅವರ ವಿಶೇಷಾಧಿಕಾರಿಯಾಗಿ ಎಂ. ವೆಂಕಟೇಶ್ ಅವರನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಲಾಗಿದ್ದು, ಸಿಎಂ ಮಾಧ್ಯಮ ಸಲಹೆಗಾರರಾಗಿ ಕೆ.ವಿ.ಪ್ರಭಾಕರ್ ಹಾಗೂ ಸಿಎಂ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯೆಲ್ ಅವರನ್ನು ನೇಮಕ ಮಾಡಲಾಗಿದೆ. ಸಿಎಂ ಕಾನೂನು ಸಲಹೆಗಾರರಾಗಿ ಕೊಡಗು ಜಿಲ್ಲೆಯ ವಿರಾಜಪೇಟೆ ಶಾಸಕ ಪೊನ್ನಣ್ಣ ನೇಮಕ ಮಾಡಲಾಗಿದೆ.

Join Whatsapp