ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ: ಮುರುಘಾ ಮಠದ ಡಾ.ಶಿವಮೂರ್ತಿ ಸ್ವಾಮೀಜಿ ವಶಕ್ಕೆ ?

Prasthutha|

ಬೆಂಗಳೂರು: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರನ್ನು ಚಿತ್ರದುರ್ಗ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಆದರೆ ಶ್ರೀಗಳು ತನ್ನನ್ನು ಯಾರು ಕೂಡ ವಶಕ್ಕೆ ಪಡೆದಿಲ್ಲ. ಪೊಲೀಸ್ ಭದ್ರತೆಯಲ್ಲಿ ಮಠಕ್ಕೆ ವಾಪಸಾಗುತ್ತಿದ್ದೇನೆ ಎಂದು ಸ್ಪಷ್ಟಪಡಿಸಿದ್ದಾರೆ.

- Advertisement -

ಧಾರವಾಡ ಮಠಕ್ಕೆ ಬೆಳಗ್ಗಿನ ಜಾವ ಹೋಗಿದ್ದೆ, ಪೊಲೀಸ್ ಭದ್ರತೆಯಲ್ಲಿ ಚಿತ್ರದುರ್ಗ ಮಠಕ್ಕೆ ಹಿಂದಿರುಗುತ್ತಿದ್ದೇನೆ ಎಂದು ಸ್ವಾಮೀಜಿ ಸ್ಪಷ್ಟಪಡಿಸಿದ್ದಾರೆ.

ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿತ್ತು.

- Advertisement -

ಪೊಲೀಸರು ಸ್ವಾಮೀಜಿಯ ಕಾರನ್ನು ಹಿಂಬಾಲಿಸುತ್ತಿದ್ದರು. ಇದನ್ನೇ ಕೆಲವರು ಬಂಧನ ಎಂದು ಬಿಂಬಿಸಿದ್ದಾರೆ ಎಂದು ಮಠದ ಭಕ್ತರು ಆರೋಪಿಸಿದ್ದಾರೆ.



Join Whatsapp