ಜನರ ಗಮನ ಕೋಮುಸಂಘರ್ಷದತ್ತ ಸೆಳೆದು ಬೆಲೆ ಏರಿಕೆ ಮಾಡುತ್ತಿದೆ: ಬಿಜೆಪಿ ಸರ್ಕಾರದ ವಿರುದ್ಧ AAP ವಾಗ್ದಾಳಿ

Prasthutha|

ಬೆಂಗಳೂರು:  ಬಿಜೆಪಿ ಸರ್ಕಾರವು ಜನರ ಗಮನಗಳನ್ನು ಕೋಮುಸಂಘರ್ಷದತ್ತ ಸೆಳೆದು ಬೆಲೆ ಏರಿಕೆ ಮಾಡುತ್ತಿದೆ ಎಂದು ಎಎಪಿಯ ಬೆಂಗಳೂರು ಮಹಿಳಾ ಘಟಕದ ಅಧ್ಯಕ್ಷೆ ಕುಶಲಸ್ವಾಮಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

- Advertisement -

ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೇಂದ್ರ ಹಾಗೂ ರಾಜ್ಯ ಬಿಜೆಪಿ ಸರ್ಕಾರಗಳ ದುರಾಡಳಿತದಿಂದಾಗಿ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಕೇಂದ್ರ ಸರ್ಕಾರವು ಅಡುಗೆ ಅನಿಲ, ಇಂಧನ ತೈಲ ಮುಂತಾದವುಗಳ ಬೆಲೆ ಏರಿಕೆ ಮಾಡುತ್ತಿದ್ದರೆ, ರಾಜ್ಯ ಸರ್ಕಾರವು ವಿದ್ಯುತ್, ಹಾಲಿನ ಬೆಲೆಯನ್ನು ಏರಿಸುತ್ತಿದೆ. ಉದ್ಯಮಿಗಳಿಗೆ ಲಾಭ ಮಾಡಿಕೊಟ್ಟು ಅವರಿಂದ ಪಕ್ಷಕ್ಕೆ ದೇಣಿಗೆ ಪಡೆಯುವ ದುರುದ್ದೇಶದಿಂದ ಸರ್ಕಾರಗಳು ಈ ರೀತಿ ಮಾಡುತ್ತಿವೆ. ಇದರ ಪರಿಣಾಮವಾಗಿ ಸಾಮಾನ್ಯ ಜನರು ಕಷ್ಟ ಅನುಭವಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

Join Whatsapp