ಕುಡಿದ ಅಮಲಿನಲ್ಲಿ ಕ್ಯಾಂಟರ್ ಚಾಲನೆ; ಸರಣಿ ಅಪಘಾತ , ಚಾಲಕನ ಬಂಧನ

Prasthutha|

ಕೋಲಾರ: ಕುಡಿದ ಅಮಲಿನಲ್ಲಿ ಕ್ಯಾಂಟರ್ ಚಲಾಯಿಸಿದ ಪರಿಣಾಮ ನಡೆದ ಸರಣಿ ಅಪಘಾತಗಳಲ್ಲಿ ಒಬ್ಬ ಬೈಕ್‌ ಸವಾರ ಮೃತಪಟ್ಟು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಚಿಂತಾಮಣಿ-ಕೋಲಾರ ರಸ್ತೆಯಲ್ಲಿ ನಡೆದಿದೆ.

- Advertisement -


ಮೊದಲಿಗೆ ಚಿಂತಾಮಣಿ ತಾಲೂಕಿನ ಕಾಚಹಳ್ಳಿ ಬಳಿ ಕ್ಯಾಂಟರ್‌ ಡಿಕ್ಕಿಯಾಗಿ ಅಮೀನುಲ್ಲಾ(60) ಎಂಬವರು ಮೃತಪಟ್ಟಿದ್ದಾರೆ.


ಇದೇ ಕ್ಯಾಂಟರ್ ಕುರುಬೂರು ಫಾರಂ ಬಳಿ ಮತ್ತೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಆದಿಗೆರೆ ಗ್ರಾಮದ ಬೈಕ್‌ ಸವಾರ ಸಾಬಿರ್ ಖಾನ್ (22) ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೂಡಲೇ ಗಾಯಾಳುವನ್ನು ಚಿಂತಾಮಣಿ ಸರಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಚಿಕ್ಕಬಳ್ಳಾಪುರದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -


ಕ್ಯಾಂಟರ್ ಅನ್ನು ದ್ವಿಚಕ್ರ ವಾಹನದಲ್ಲಿ ಬೆನ್ನಟ್ಟಿದ ಸಾರ್ವಜನಿಕರು ಚಾಲಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯನ್ನು ಗಾಜರಹಳ್ಳಿಯ ವಿಜಯಕುಮಾರ್ ಎಂದು ಗುರುತಿಸಲಾಗಿದೆ. ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Join Whatsapp