ಮಹಿಳಾ ಪತ್ರಕರ್ತರ ವಿರುದ್ಧದ ಪ್ರಕರಣ ಕೈಬಿಡಲು ಪ್ರೆಸ್ ಕ್ಲಬ್ ಆಫ್ ಇಂಡಿಯಾ ಒತ್ತಾಯ

Prasthutha|

ನವದೆಹಲಿ: ತ್ರಿಪುರಾ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಮಹಿಳಾ ಪತ್ರಕರ್ತರ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣವನ್ನು ಕೈಬಿಡಬೇಕೆಂದು ಪ್ರೆಸ್ ಕ್ಲಬ್ ಆಫ್ ಇಂಡಿಯಾ (ಪಿಸಿಐ) ಸರ್ಕಾರವನ್ನು ಒತ್ತಾಯಿಸಿದೆ.

- Advertisement -

ಪತ್ರಕರ್ತರ ವಿರುದ್ಧ ಪೊಲೀಸ್ ಕ್ರಮವನ್ನು ಖಂಡಿಸಿದ ಪ್ರೆಸ್ ಕ್ಲಬ್ ಆಫ್ ಇಂಡಿಯಾ, ಇಬ್ಬರು ಲೇಖಕರನ್ನು ರಾತ್ರಿಯವರೆಗೆ ಠಾಣೆಯಲ್ಲಿ ಕೂಡಿಹಾಕಿ ದೌರ್ಜನ್ಯ ಎಸಗಿರುವುದು ತ್ರಿಪುರಾ ಪೊಲೀಸರ ಸ್ಪಷ್ಟ ಮಾನವ ಹಕ್ಕಿನ ಉಲ್ಲಂಘಣೆಯಾಗಿದೆ. ಈ ನಿಟ್ಟಿನಲ್ಲಿ ಸೂಕ್ತ ಕ್ರಮ ಜರುಗಿಸಲು ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್.ಎಚ್.ಆರ್.ಸಿ) ಸರ್ಕಾರವನ್ನು ಒತ್ತಾಯಿಸಿದೆ.

ಇತ್ತೀಚೆಗೆ ತ್ರಿಪುರಾ ಕೋಮು ಗಲಭೆಗೆ ಸಂಬಂಧಿಸಿದಂತೆ ವರದಿ ಮಾಡಿದ್ದ HW ನ್ಯೂಸ್ ನೆಟ್ ವರ್ಕ್ ನ ಪತ್ರಕರ್ತರಾದ ಸಮೃದ್ಧಿ ಸಕುನಿಯಾ ಮತ್ತು ಸ್ವರ್ಣಾ ಝಾ ಎಂಬವರನ್ನು ಅಸ್ಸಾಂ ಪೊಲೀಸರು ಉಭಯ ರಾಜ್ಯಗಳ ಗಡಿ ಪ್ರದೇಶದ ಕರೀಂಗಂಜ್ ನ ನೀಲಂ ಬಝಾರ್ ನಲ್ಲಿ ಬಂಧಿಸಲಾಗಿತ್ತು.

- Advertisement -

ವಿಹಿಂಪ ಕಾರ್ಯಕರ್ತನೊಬ್ಬ ನೀಡಿದ ದೂರಿನ ಮೇಲೆ ತ್ರಿಪುರಾ ಫಾತಿಕ್ರೊಯ್ ಪೊಲೀಸ್ ಠಾಣೆಯಲ್ಲಿ ಸುಕುನ್ಯಾ ಮತ್ತು ಝಾ ಎಂಬವರ ವಿರುದ್ಧ ಪ್ರಕರಣ ದಾಖಲಿಸಲಾಗಿತ್ತು.

Join Whatsapp