ಬರ ಪರಿಹಾರ: 17,901.73 ಕೋಟಿ ರೂ. ಕೇಂದ್ರದ ನೆರವು ಕೋರಿದ ಕರ್ನಾಟಕ

Prasthutha|

- Advertisement -

ಬೆಂಳೂರು: ಕರ್ನಾಟಕದಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, , ಸಂತ್ರಸ್ತ ರೈತರ ಸಂಕಷ್ಟವನ್ನು ನಿವಾರಿಸಲು ರಾಜ್ಯ ಸರ್ಕಾರವು ಕೇಂದ್ರದಿಂದ 17,901.73 ಕೋಟಿ ರೂ.ಗಳ ನೆರವನ್ನು ಕೋರಿದೆ.

ಕೃಷಿ ಸಚಿವ ಎನ್. ಚಲುವರಾಯ ಸ್ವಾಮಿ, ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಮತ್ತು ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರನ್ನೊಳಗೊಂಡ ನಿಯೋಗವು ಕೇಂದ್ರ ಕೃಷಿ ಕಾರ್ಯದರ್ಶಿ ಮನೋಜ್ ಕುಮಾರ್ ಅಹುಜಾ ಮತ್ತು ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರೊಂದಿಗೆ ಪ್ರತ್ಯೇಕ ಸಭೆ ನಡೆಸಿದೆ. ಸಭೆಗಳಲ್ಲಿ ನಿಯೋಗ ರಾಜ್ಯದ ಬರ ಸ್ಥಿತಿಯ ಕುರಿತು ಸಮಗ್ರವಾದ ಮಾಹಿತಿ ‌ನೀಡಿದ್ದಾರೆ.

- Advertisement -

ಸಭೆಯ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತಾಡಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಎನ್‌ಡಿಆರ್‌ಎಫ್‌ ನಿಯಮಾವಳಿ ಪ್ರಕಾರ ಒಟ್ಟು ₹17,901.73 ಕೋಟಿ ಬರ ಪರಿಹಾರಕ್ಕೆ ಮನವಿ ಮಾಡಿದ್ದೇವೆ. ಶೀಘ್ರವೇ ಹಣ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.

ಸೆಪ್ಟೆಂಬರ್ 22 ರ ಹೊತ್ತಿಗೆ, ರಾಜ್ಯವು ಶೇಕಡಾ 26 ರಷ್ಟು ಮಳೆಯ ಕೊರತೆಯನ್ನು ದಾಖಲಿಸಿದೆ. ಸರ್ಕಾರ ಇದುವರೆಗೆ 216 ತಾಲ್ಲೂಕುಗಳಲ್ಲಿ ಬರಗಾಲ ಎಂದು ಘೋಷಿಸಿದ್ದು, ನವೆಂಬರ್ ಆರಂಭದಲ್ಲಿ ಮುಂದಿನ ಘೋಷಣೆಗಳನ್ನು ಪರಿಗಣಿಸಲಾಗುವುದು ಎಂದಿದ್ದಾರೆ

Join Whatsapp