ಶಾರುಖ್ ಖಾನ್ ಬಿಜೆಪಿ ಸೇರಿದರೆ ಡ್ರಗ್ಸ್ ಕೂಡ ಸಕ್ಕರೆ ಪುಡಿಯಾಗಿ ಬದಲಾಗುತ್ತದೆ: ಸಚಿವ ಚಗನ್ ಭುಜಬಲ್ ಟೀಕೆ

Prasthutha|


ಮುಂಬೈ: ಶಾರುಖ್ ಖಾನ್ ಅವರು ಬಿಜೆಪಿ ಸೇರಿದರೆ ಡ್ರಗ್ಸ್, ಸಕ್ಕರೆ ಪುಡಿಯಾಗಿ ಬದಲಾಗುತ್ತದೆ ಎಂದು ಮಹಾರಾಷ್ಟ್ರ ಸರ್ಕಾರದ ಸಚಿವ ಚಗನ್ ಭುಜಬಲ್ ಟೀಕಿಸಿದ್ದಾರೆ.

- Advertisement -


ಈ ಬಗ್ಗೆ ಮಾತನಾಡಿದ ಅವರು, ಗುಜರಾತ್ ನ ಮುಂದ್ರಾ ಬಂದರಿನಲ್ಲಿ ಪತ್ತೆಯಾದ 3 ಸಾವಿರ ಕೆ.ಜಿ ಹೆರಾಯಿನ್ ಪ್ರಕರಣವನ್ನು ತನಿಖೆ ಮಾಡುವ ಬದಲು ಎನ್ ಸಿಬಿ ಶಾರುಖ್ ಖಾನ್ ಪುತ್ರನ ಹಿಂದೆ ಬಿದ್ದಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಮುಂಬೈ ಕ್ರೂಸ್ ಡ್ರಗ್ಸ್ ಪ್ರಕರಣದಲ್ಲಿ ಶಾರುಖ್ ಪುತ್ರ ಆರ್ಯನ್ ಖಾನ್ ಆರೋಪಿಯಾಗಿದ್ದು, ಆರ್ಯನ್ ಖಾನ್ ಅವರನ್ನು ರಾಷ್ಟ್ರೀಯ ಮಾದಕ ಪದಾರ್ಥ ನಿಯಂತ್ರಣ ದಳ (ಎನ್ಸಿಬಿ) ಬಂಧಿಸಿದ್ದು, ಸದ್ಯ ಅವರು ನ್ಯಾಯಾಂಗ ವಶದಲ್ಲಿದ್ದಾರೆ. ಜಾಮೀನು ಕೋರಿ ಅವರು ಸಲ್ಲಿಸಿರುವ ಅರ್ಜಿಯನ್ನು ಕೋರ್ಟ್ ತಿರಸ್ಕರಿಸಿದೆ.

Join Whatsapp